Advertisement

Tag: kendasampige

ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಗಂಟಲಿನಿಂದ ಅದೆಷ್ಟೇ ಉಸಿರೆಳೆದರೂ, ನಾಲಗೆಯನ್ನು ಹೊರಳಿಸಿ ಉರುಳಿಸಿದರೂ ಊಹೂಂ, ಹಾಲು ಹಣ್ಣು ಬರಲೊಲ್ಲದು. ಅವರೂ ಹಿಡಿದ ಪಟ್ಟು ಬಿಡುವಂತೆ ಕಾಣಲಿಲ್ಲ. ಪಕ್ಕದಲ್ಲಿ ಪುಂಡಿ ಸೊಪ್ಪನ್ನು ಬಿಡಿಸಿಟ್ಟಿದ್ದರು. ಆ ಪುಂಡಿ ಕೋಲು ದಪ್ಪವಾಗಿರುತ್ತದೆ. ಮುಂದೇನು ಆಗಿರಬಹುದು ಹೇಳಿ? ಅನುಮಾನವೇ ಬೇಡ, ಬೆನ್ನಿಗೆ ಎರಡೇಟು ಬಾರಿಸಿದರು. ಚುರ್ ಎಂದು ಬಿದ್ದ ಏಟಿಗೆ ಕಣ್ಣಲ್ಲಿ ನೀರು ಜಿನುಗಿಸಿತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಏಳನೆಯ ಕಂತು

Read More

ಪುಸ್ತಕ ಪ್ರಕಟಣೆಯ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ

ಪುಸ್ತಕಕ್ಕೆ ಹೆಸರು ಇಡಬೇಕಿತ್ತಲ್ಲ. ಮುಖಪುಟ ಬರೆದಾಗ ಪುಸ್ತಕದ ಹೆಸರೂ ಕೊಟ್ಟರೆ ಕಲರ್ ಕಾಂಬಿನೇಷನ್‌ಗೆ ಉತ್ತಮ ಎನ್ನುವ ಅಭಿಪ್ರಾಯ ಬಂದಿತ್ತು. ನನ್ನ ಕತೆಗಳ ಹಸ್ತಪ್ರತಿಯ ಒಂದು ಕತೆ ಹೆಸರು ವೈಶಾಖ ಎಂದು. ಈಗಾಗಲೇ ಚದುರಂಗ ಅವರು ವೈಶಾಖ ಎನ್ನುವ ಕಾದಂಬರಿ ಬರೆದು ಅದು ಪ್ರಖ್ಯಾತವಾಗಿತ್ತು. ನನ್ನ ಸಂಕಲನಕ್ಕೂ ವೈಶಾಖ ಹೆಸರು ಇಟ್ಟರೆ ಓದುಗರು ಕನ್ಫ್ಯೂಸ್ ಮಾಡಿಕೊಳ್ಳುವ ಸಂಭವ ಹೆಚ್ಚಿರುತ್ತೆ ಅನಿಸಿತು. ಆದರೂ ಚದುರಂಗರ ವೈಶಾಖ ಕಾದಂಬರಿಯು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೬ನೇ ಬರಹ ನಿಮ್ಮ ಓದಿಗೆ

Read More

ಅಪ್ಪಿಕೋ ಭೂತಾಯಿ ಗೌರಾದೇವಿ!: ಸುಕನ್ಯಾ ಕನಾರಳ್ಳಿ ಅಂಕಣ

ಅಧಿಕಾರಿಗಳಿಗೆ ಈಗ ಪೇಚಿಗಿಟ್ಟುಕೊಂಡಿತು. ಸದ್ಯಕ್ಕೆ ಅಲ್ಲಿಂದ ತೊಲಗಿ ನಂತರ ಬಂದರೆ ಹೇಗೆ? ಆದಿವಾಸಿ ಹೆಂಗಸರಿಗೆ ಸರಕಾರದ ಕುತಂತ್ರಗಳೇನೂ ಅಪರಿಚಿತವಲ್ಲ. ಅವರ ಆಯುಧಗಳನ್ನು ಹೊತ್ತೊಯ್ದು ಕೊಡುವ ನೆಪದಲ್ಲಿ ತಾತ್ಕಾಲಿಕವಾಗಿ ಕಟ್ಟಿದ್ದ ಸೇತುವೆಯನ್ನು ಅದೇ ಅಸ್ತ್ರಗಳಿಂದ ಉರುಳಿಸಿದಾಗ ಸರಕಾರ ಇತ್ತ ಕಡೆಯಲ್ಲಿ, ಇವರೆಲ್ಲ ಅತ್ತ ಕಡೆಯಲ್ಲಿ. ಇಡೀ ರಾತ್ರಿ ಸರಕಾರದ ಮಂದಿ ಮತ್ತೆ ಕಾಡೊಳಗೆ ನುಸುಳದಂತೆ ಹೆಂಗಸರು ಕಾವಲಿದ್ದರು. ಮಾರನೆಯ ದಿನ ಹಳ್ಳಿಗೆ ಹಿಂತಿರುಗಿದ ಗಂಡಸರಿಗೆ ಆಶ್ಚರ್ಯ ಕಾದಿತ್ತು. ಮಾರ್ಚ್ ೩೧, ೧೯೭೪ ರಂದು ಕಣಿವೆಯಲ್ಲಿ ತಮಟೆ ಕಹಳೆಗಳ ಸಮೇತ ಬೃಹತ್ ಪ್ರದರ್ಶನ ನಡೆಯಿತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೆರಡನೆಯ ಬರಹ

Read More

ಸುಧಾ ಆಡುಕಳ ಬರೆದ ಈ ಭಾನುವಾರದ ಕತೆ “ಆರೂವರೆ ಅಡಿಯ ಮನುಷ್ಯ”

ನಾನು ಗುರುವೆಂದು ಭಾವಿಸಿದ ಫುಲೆ ದಂಪತಿಗಳು ಹೇಳಿದ್ದೂ ಇದೇ ಮಾತುಗಳನ್ನು. ಪುಟ್ಟ ಬಾಲಕಿಯರಿಂದ ಹಿಡಿದು, ಮದುವೆಯಾಗಿ ವಿಧವೆಯರಾದ ಹೆಣ್ಣುಗಳವರೆಗೆ ಎಲ್ಲರ ಕೈಯ್ಯಲ್ಲಿಯೂ ಅಕ್ಷರದ ದೀವಿಗೆಯನ್ನು ಹಿಡಿಸಬೇಕೆಂದು ಅವರು ಶ್ರಮಿಸಿದ ಮಾರ್ಗ ನನ್ನೆದುರು ತೆರೆದುಕೊಂಡಿತ್ತು. ಅವರು ಹುಟ್ಟುಹಾಕಿದ ಅರಿವಿನ ಸಸಿಯಿಂದು ಆರೈಕೆಯಿಲ್ಲದೇ ಸೊರಗಿ ಸಾಯುವ ಸ್ಥಿತಿಯಲ್ಲಿತ್ತು. ವಾಸ್ತವ ಸತ್ಯವನ್ನರಿಯಲು ನಾನು ರಾಜ್ಯದ ತುಂಬೆಲ್ಲ ಸಂಚರಿಸತೊಡಗಿದೆ.
ಸುಧಾ ಆಡುಕಳ ಬರೆದ ಕತೆ “ಆರೂವರೆ ಅಡಿಯ ಮನುಷ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನ್ಯಾಯದೇವತೆಯ ತಕ್ಕಡಿಯಲ್ಲಿ ಹೊಸ, ಹಳೆ ಅಹವಾಲು: ವಿನತೆ ಶರ್ಮ ಅಂಕಣ

ಇದೆಲ್ಲವನ್ನೂ ನೋಡುತ್ತಿರುವಾಗ ಇಗೋ ಜನವರಿ ೨೬ ಬರುತ್ತಿದೆ. ಅಂದು ಆಸ್ಟ್ರೇಲಿಯಾ ಡೇ – ಕ್ಯಾಪ್ಟನ್ ಜೇಮ್ಸ್ ಕುಕ್ ಸಿಡ್ನಿ ಸಮುದ್ರತೀರಕ್ಕೆ ಬಂದು, ಅವನ ಹಡಗು ಅಲ್ಲಿ ಲಂಗರು ಹಾಕಿ, ಓಹೋ ಈ ಜಾಗದಲ್ಲಿ ಯಾರೂ ಮನುಷ್ಯರು ಇಲ್ಲ, ಆದ್ದರಿಂದ ಇದು ತಮಗೆ ಸೇರಿದ್ದು, ಬ್ರಿಟಿಷರಿಗೆ ಸೇರಿದ ನಾಡು, ಎಂದು ಘೋಷಿತವಾದ ದಿನ. ಅಲ್ಲಿಂದ ಹೊಸ ಆಸ್ಟ್ರೇಲಿಯದ ಹುಟ್ಟು, ಬೆಳವಣಿಗೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ