Advertisement

Tag: kendasampige

ವಿಷಮಯ ವಿಶ್ವದ ವಿಷಾದ ಗಾಥೆ: ನಾಗೇಶ್‌ ಹೆಗಡೆ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ತನ್ನ ಮಕ್ಕಳಿಗಾಗಿ ಆಸ್ತಿ, ಐಶ್ವರ್ಯ ಸಂಪತ್ತುಗಳನ್ನೆಲ್ಲ ಮಾಡುತ್ತಾನೆ. ಆದರೆ ಪ್ರಕೃತಿ ಮಾನವನಿಗೆ ಕೊಟ್ಟ ನಿಸರ್ಗದತ್ತವಾದ ಸಂಪತ್ತನ್ನೆಲ್ಲ ಲೂಟಿ ಮಾಡುತ್ತಿದ್ದಾನೆ. ನಾವು ಪ್ರಕೃತಿಗೆ ಕೊಡಬೇಕಾದ ಗೌರವವನ್ನು ಕೊಡದೆ ಅವಿಧೇಯತೆಯಿಂದ ನಡೆಸಿಕೊಳ್ಳುತ್ತಾ ಬಂದಿದ್ದೇವೆ. ಪ್ರಕೃತಿಯ ಮುನಿಸನ್ನು ಎದುರಿಸಲು ನಾವು ಸಿದ್ಧರಿದ್ದೇವೆಯೇ, ಅದು ಸಾಧ್ಯವೇ? ಪ್ರಕೃತಿಯ ವಿರುದ್ಧ ಮನುಷ್ಯ ಗೆದ್ದಿದ್ದೇ ಆದರೆ ಮುಂದೆ ಅವನಿಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಚಿಂತಕ ಯೂಜಿನ್ ಶುಮಾಕರ್‌ರ ಮಾತನ್ನು ಲೇಖಕರು ಉಲ್ಲೇಖಿಸುತ್ತಾರೆ.
ನಾಗೇಶ್‌ ಹೆಗಡೆ ಬರೆದ ‘ಪರಿಸರದ ಮಹಾ ದುರಂತಗಳು’ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

Read More

ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ಬರಲಿವೆ. ಬಹುಸೂಕ್ಷ್ಮವಾಗಿ ಅವಲೋಕಿಸಿದರೆ ದಾಳಿಗೀಡಾದ ಧರ್ಮದ ಜನಸಮುದಾಯದ ದನಿಗೆ ಈಗಾಗಲೇ ಒಂದು ನಿರ್ದಿಷ್ಟ ಬಲ ಬಂದಿದೆ. ಇದು ಮತ್ತಷ್ಟು ಬೆಳೆಯುವ ಸೂಚನೆಗಳಿವೆ. ದೂರದ ಅಮೆರಿಕೆಯಲ್ಲಿ ಈ ಜನಸಮುದಾಯವು ಎಲ್ಲಾ ಮಟ್ಟಗಳಲ್ಲೂ ಆಳವಾದ ಪ್ರಭಾವ ಮತ್ತು ಹಿಡಿತವನ್ನು ಹೊಂದಿದೆ. ಮತ್ತೊಂದು ವಸಾಹತುಶಾಹಿ ಸಮಾಜವಾದ ಆಸ್ಟ್ರೇಲಿಯಾದಲ್ಲೂ ಹಾಗಾಗಬಹುದೆ? ದಾಳಿ ನಡೆಸಿದ ಅಪ್ಪ-ಮಗ ಜೋಡಿಯಲ್ಲಿ, ಅಪ್ಪನ ಬಳಿ ಇದ್ದದ್ದು ಭಾರತೀಯ ಪಾಸ್ಪೋರ್ಟ್. ಆತ ಭಾರತದ ಹೈದರಾಬಾದ್ ಮೂಲದವರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುವೆಂಪು – ಕನ್ನಡದ ಭಾವಸೆಲೆ ಹಾಗೂ ವೈಚಾರಿಕ ದಿಕ್ಸೂಚಿ: ಎಲ್.ಜಿ.ಮೀರಾ ಅಂಕಣ

ಕವಿಯಲ್ಲದವರ ಮಟ್ಟಿಗೆ ಸಾಧಾರಣ ಬೆಟ್ಟಗುಡ್ಡ ಅನ್ನಿಸಿಬಿಡಬಹುದಿದ್ದ ಕುಪ್ಪಳ್ಳಿಯ ಒಂದು ಸ್ಥಳವು ಈ ರಸಋಷಿಯ ಕಣ್ಣಲ್ಲಿ ಅತ್ಯಂತ ಪ್ರೀತಿಯ `ಕವಿಶೈಲ’ವಾದದ್ದು ಅವರಿಗಿದ್ದ ಅಮಿತ ಪ್ರಕೃತಿಪ್ರೇಮಕ್ಕೆ ಸಾಕ್ಷಿ. ಅವರೆಲ್ಲೇ ಇದ್ದರೂ ಅವರ ಮನಸ್ಸು ಸದಾ ಕಾಲ ತಮ್ಮ ಪ್ರೀತಿಯ ಮಲೆನಾಡನ್ನು ಧ್ಯಾನಿಸುತ್ತಿತ್ತು. “ನಾನು ಭೌತಿಕವಾಗಿ ಮೈಸೂರಿನಲ್ಲಿದ್ದರೂ ಮಾನಸಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಮಲೆನಾಡಿನಲ್ಲಿರುತ್ತೇನೆ. ಪ್ರತಿ ನಿತ್ಯ ಹಲವು ಸಾರಿ ನವಿಲುಕಲ್ಲಿಗೆ ಹೋಗಿ ಬರ್ತೀನಿ, ಕವಿಶೈಲದಲ್ಲಿ ಕುಳಿತು ಧ್ಯಾನ ಮಾಡ್ತೀನಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ಮೂರನೆಯ ಬರಹ

Read More

ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸ್ವಲ್ಪ ಹೊತ್ತು ಮಸೆದ ನಂತರ ತನ್ನ ತೋರು ಬೆರಳನ್ನು ಕತ್ತಿಯ ಅಲಗಿಗೆ ತಾಗಿಸುತ್ತಾ “ಹಾಂ, ಈಗ ಹರಿತ ಆಯ್ತು. ಕತ್ತಿ ಹರಿತ ಇಲ್ಲಂದ್ರೆ ಯಾವುದಕ್ಕೂ ಉಪ್ಯೋಗಿಲ್ಲ ನೋಡು. ಒಂದು ರೀತಿಯಲ್ಲಿ ಈ ಬಿಸಿ ಚಾ ಇದ್ದ ಹಾಗೆ. ಬಿಸಿಬಿಸಿ ಇದ್ದಾಗ ಮಾತ್ರ ಕುಡಿಬಹುದು, ಆದ್ರೆ ತಣ್ಣಗಾದ್ರೆ ಕುಡಿಯೋಕೆ ಆಗಲ್ಲ ಅಲ್ವಾ? ಸ್ಥಿತಿ ಮುಖ್ಯ, ಬರೇ ಚಾ ಅಲ್ಲ…” ಅಂತ ಹೇಳಿ ನಮ್ಮ‌ಮನೆ ಹಿಂದಿನ ತೋಟಕ್ಕೆ ತಾಗಿ ಇದ್ದ ಅವರ ಗದ್ದೆಗೆ ಹೋದ್ರು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ನಾಲ್ಕನೆಯ ಬರಹ

Read More

ಕರುಣಾಳು ಬಾ ಬೆಳಕೆ-ನವೋದಯ ಕನ್ನಡ ಕಾವ್ಯದಲ್ಲಿ ಪ್ರಾರ್ಥನೆ: ಸುಕನ್ಯಾ ಕನಾರಳ್ಳಿ ಅಂಕಣ

ನಾಗರಿಕತೆಯ ಇತಿಹಾಸ ಬರ್ಬರತೆಯ ಇತಿಹಾಸವೂ ಹೌದು ಎಂದು ಕಾರ್ಲ್ ಮಾರ್ಕ್ಸ್ ಹೇಳುತ್ತಾನೆ. ವೈಚಾರಿಕತೆ, ವಿಜ್ಞಾನ, ತಂತ್ರಜ್ಞಾನಗಳು ಹೊರಗಿಂದ ಬಂದು ಎರಡು ದಿನವಿದ್ದು ಮರಳಿ ಹೋದ ನೆಂಟರಾಗಿರಲಿಲ್ಲ. ಬದಲಿಗೆ ನಮ್ಮ ದೃಷ್ಟಿಕೋನಗಳನ್ನೇ ಪಲ್ಲಟಿಸಿದ, ಅಸಹನೆ ಮತ್ತು ಕ್ರೌರ್ಯಗಳನ್ನು ಸಾಮಾನ್ಯವಾಗಿಸಿದ ಪ್ರಚಂಡ ಶಕ್ತಿಯವು. ಯಂತ್ರವೇ ಬೃಹತ್ತಾಗಿ ಬೆಳೆದು ಮನುಷ್ಯ ಕುಲವನ್ನು ಆತ್ಮಹೀನವಾಗಿಸುವ ನಾಗರಿಕತೆ ಎಂಬ ದಮನಶಕ್ತಿಯ ಬಗ್ಗೆ ಎಚ್ಚರಿಸಲು ಇಂಗ್ಲೀಷ್ ರೊಮ್ಯಾಂಟಿಕ್ಕರು ಪ್ರಕೃತಿಯ ದನಿಯಾದ ಕಾವ್ಯವನ್ನೇ ಬಳಸಿಕೊಂಡರು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಏಳನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ