Advertisement

Tag: kendasampige

ಸದ್ದು… ಇಲ್ಲಿ ಯುದ್ಧ ಕತೆ ಹೇಳುತ್ತಿದೆ…

ಮೇಲ್ನೋಟಕ್ಕೆ ಇದು ಪೌಲ್ ಮತ್ತು ಆತನ ಸ್ನೇಹಿತರ ಜೀವನದ ಕತೆ ಆದರೂ, ಅದರ ಜೊತೆಯಲ್ಲಿ ಯುದ್ಧವನ್ನು ಒಳಗಿನಿಂದ ಹೊರಗಿನಿಂದ ತೋರಿರುವ ರೀತಿ ಅನನ್ಯ. ಯುದ್ಧವೆಂದರೆ ಹಸಿವು. ನೆಲದ ಹಸಿವು. ಇದರ ಜೊತೆಯಲ್ಲಿ ದೇಹದ ಹಸಿವು ಹೆಣ್ಣಿನ ಹಸಿವು ಹೆಚ್ಚಾಗಿ ಯುದ್ಧದಲ್ಲೇ ಇದ್ದು ಬದುಕಿನ ಹಸಿವನ್ನು ಅದ್ಭುತವಾಗಿ ತೋರಿಸಿದ್ದಾರೆ, ಪ್ರತಿ ಸೈನಿಕನು ಕೊನೆ ಗಳಿಗೆಯಲ್ಲಿ ಬದುಕಲು ಒದ್ದಾಡುವ ಕ್ಷಣಗಳಿವೆ.
‘ಆಲ್ ಕ್ವೈಯೆಟ್ ಆನ್ ದ ವೆಸ್ಟರ್ನ್‌ ಫ್ರಂಟ್’ ಸಿನಿಮಾದ ಕುರಿತು ಜಯರಾಮಾಚಾರಿ ಬರಹ

Read More

ಅನೇಕಾನೇಕ ಹೊಳಹುಗಳು….

ಯಾರೂ ಇಲ್ಲದೇ ಇರುವ ಸ್ಥಳದಲ್ಲಿ ತನ್ನದೇ ಹೆಜ್ಜೆಯನ್ನು ಇನ್ಯಾರದೋ ಎಂದು ನೋಡುವುದು ಒಂಟಿತನ ಸ್ಥಿರವಲ್ಲ ಕಷ್ಟ ಎಂಬುದನ್ನು ಅರ್ಥೈಸುತ್ತದೆ. ವಿಶಾಲ ಬದುಕಿನಲ್ಲಿ ಆಸೆ ಇರಿಸಿಕೊಂಡವನು ಇರುವ ಚಾಕುವಿನಲ್ಲಿಯೇ ಬೇಟೆಯಾಡುವ ಅಭ್ಯಾಸ ಪ್ರಾರಂಭಿಸುತ್ತಾನೆ ಪ್ರಯೋಗಕ್ಕೂ ಅಭ್ಯಾಸಬಲವಿರಬೇಕು ಎಂಬುದು ಇಲ್ಲಿ ಸಾಬೀತಾಗುತ್ತದೆ. ಅಂತರಾಷ್ಟ್ರೀಯ ಗುಪ್ತಚರ ಬಳಗದವನು ನಾನು ಹಾಗೆ….! ನಾನು ಹೀಗೆ….!
ಕೆ.ವಿ. ತಿರುಮಲೇಶರ “ಅನೇಕ” ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ದಾರಾಸುರಂನ ಐರಾವತೇಶ್ವರ ದೇಗುಲದ ಒಳಗೂ… ಹೊರಗೂ…

ನಮಗೆ ರಥ ಅಂದ ಕೂಡಲೇ ನೆನಪಾಗುವುದು ಹಂಪಿಯ ವಿಜಯ ವಿಠ್ಠಲ ದೇವಾಲಯದ ರಥ, ಆಮೇಲೆ ಕೋನಾರ್ಕಿನ ಸೂರ್ಯ ದೇವಾಲಯದ ಚಕ್ರಗಳು. ಆದರೆ ಅದೇ ರೀತಿ ಇರುವ ರಥದ ಕಲ್ಪನೆಯಲ್ಲಿ ಕಟ್ಟಿರುವ ಇನ್ನೂ ಹಲವು ದೇವಾಲಯಗಳಿವೆ. ತಾಡಿಪತ್ರಿಯ ರಥದ ಮಾದರಿಯಲ್ಲಿರುವ ಗರುಡಗಂಬ, ಕುಂಭಕೋಣಂನ ಸಾರಂಗಪಾಣಿ ದೇವಾಲಯ ಹಾಗೂ ದಾರಾಸುರಮ್‌ನ ದೇವಾಲಯ ತಕ್ಷಣಕ್ಕೆ ನೆನಪಿಗೆ ಬರುವ ನಾನು ಕಂಡ ರಥದ ದೇವಾಲಯಗಳು.
‘ದೇವಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ಬರಹ

Read More

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ