Advertisement

Tag: kendasampige

ಬಿಸಿಲು ಮೂಡುವ ಹೊತ್ತಿಗೆ, ಕೈಯಲ್ಲೊಂದು ಹೊತ್ತಿಗೆಯಿರಲಿ

ಇತ್ತೀಚೆಗೆ ಇತ್ತ ನಾಟಕವೂ ಅಲ್ಲದ, ಅತ್ತ ಸರಳ ಓದುವಿಕೆಯೂ ಅಲ್ಲದ ಮಧ್ಯಮಾರ್ಗದಲ್ಲಿ ನಿಂತ ಆಡಿಯೋ ಪುಸ್ತಕಗಳ ಭರಾಟೆಯೂ ಹೆಚ್ಚಿದೆ. ಕೆಲಸ ಮಾಡುತ್ತಲೇ ಕೇಳಿಸಿಕೊಳ್ಳಬಹುದು. ವಿಚಾರ ತಿಳಿಯಬಹುದು ಎಂಬ ಸಕಾರಾತ್ಮಕ ಅಂಶಗಳ ಬೆಂಬಲವಿದ್ದರೂ, ಏಕಾಂತದಲ್ಲಿ ಈ ಜಗದ ಪರಿವೆ ಇಲ್ಲದೆ, ಮನೋಲೋಕದಲ್ಲಿ ಪಾತ್ರವೇ ನಾವಾಗಿ ವಿಹರಿಸುವ ‘ಓದಿ’ನ ಆನಂದವನ್ನು ಎಂದಿಗೂ ಅವು ನೀಡಲಾರವು. ನಮ್ಮ ಕಲ್ಪನೆಯಲ್ಲಿ ಪಾತ್ರಗಳಿಗೆ ರೂಪ, ಬಣ್ಣ, ನಿಲುವು ಸಿಕ್ಕಂತೆಯೇ ಅವುಗಳಿಗೆ ಧ್ವನಿಯೂ ಲಭಿಸಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ

Read More

ದೇವಾಲಯಗಳಲ್ಲಿ ಮಿಥುನ ಶಿಲ್ಪಗಳು

ಇನ್ನೊಂದು ಕುತೂಹಲಕರ ವಿಷಯ ಅಂದರೆ, ಆ ಕಾಲದ ಸಾಮಾಜಿಕ ಜೀವನದ ಮೇಲೆ ಬೆಳಕು ಚೆಲ್ಲುವ ಕೃತಿಗಳನ್ನು ರಚಿಸಿರುವ, ತಮ್ಮ ಪ್ರವಾಸದ ಕಥೆ ಹೇಳುತ್ತ ಅಂದಿನ ಜೀವನದ ಬಗ್ಗೆ ತಿಳಿಸುವ ಕಲಣ, ಬಿಲ್ಲಣ ಮುಂತಾದವರ ಕೃತಿಗಳಲ್ಲೂ ಕೂಡ ಯಾವ ಕಾರಣಕ್ಕೆ ದೇವಾಲಯಗಳಲ್ಲಿ ಮಿಥುನ ಶಿಲ್ಪಗಳನ್ನು ಕೆತ್ತುತ್ತಾರೆ ಎನ್ನುವುದರ ಬಗ್ಗೆ ಏನೂ ಮಾಹಿತಿ ಸಿಗುವುದಿಲ್ಲ. ಹಾಗಾಗಿ ಇದು ಅಂದಿನ ಸಾಮಾಜಿಕ ಜೀವನದಲ್ಲಿ ತುಂಬಾ ಸಹಜವಾದ ಭಾಗವಾಗಿರಬಹುದು.
‘ದೇವಸನ್ನಿಧಿ’ ಅಂಕಣದಲ್ಲಿ ಪುರಾತನ ದೇವಸ್ಥಾನಗಳಲ್ಲಿ ಕಾಣಸಿಗುವ ಮಿಥುನ ಶಿಲ್ಪಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

Read More

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ