Advertisement

Tag: kendasampige

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

ತೀರಿಹೋದ ತಿರುಮಲೇಶರ ಕುರಿತು

ಇದೇನು ನನ್ನ ವೈಯುಕ್ತಿಕ ಅನಿಸಿಕೆ ಅಲ್ಲ. ಕಾವ್ಯ ಪ್ರತಿಭೆಯ ಜೊತೆಜೊತೆಗೇ ಅದರ ದುಪ್ಪಟ್ಟು ವ್ಯಾಮೋಹಗಳೂ ಇದ್ದರೆ ಮಾತ್ರ ಕವಿಗಳು ಇಂತಹ ಖಿನ್ನತೆಗಳಿಂದ ಪಾರಾಗುತ್ತಾರೆ ಎಂದು ನಾನು ಯೌವನದಲ್ಲಿ ಓದಿರುವ ಸಂಸ್ಕೃತ ಕಾವ್ಯಮೀಮಾಂಸೆಗಳು ಹೇಳಿದ್ದವು. ಬಹುಶಃ ತಿರುಮಲೇಶರು ಪಾಶ್ಚಾತ್ಯ ಕಾವ್ಯ ಮೀಮಾಂಸೆಗೆ ಹೆಚ್ಚು ಒತ್ತುಕೊಟ್ಟಿದ್ದರು ಅನಿಸುತ್ತದೆ ಇರಲಿ ಬಿಡಿ.
ಕೆ.ವಿ. ತಿರುಮಲೇಶರ ಕುರಿತು ಅಬ್ದುಲ್‌ ರಶೀದ್‌ ಬರಹ ನಿಮ್ಮ ಓದಿಗೆ

Read More

ನಾಲ್ಕಾಣೆಯಿಂದ ಒಂದು ಪ್ರಾಣ ಉಳಿಯಿತು!

ಆಕೆ ಅಗಸಿಯ ಕಡೆಗೆ ಹೋಗುತ್ತಿರುವುದರಿಂದ ಏನಾಗಿದೆ ಎಂದು ಕೇಳಿಯೆಬಿಟ್ಟೆ. ಅಡುಗೆಯಲ್ಲಿ ಉಪ್ಪಿಲ್ಲವೆಂದು ಗಂಡ ಹೊಡೆದಿರುವುದಾಗಿ ತಿಳಿಸಿದಳು. ‘ಆತ ಹಣ ಕೊಡದಿದ್ದರೆ ಉಪ್ಪು ಎಲ್ಲಿಂದ ತರಲಿ’ ಎಂದು ಕೇಳಿದಳು. ಈ ರೀತಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಬಾವಿಗೆ ಹಾರುವುದಾಗಿ ಹೊರಟೇಬಿಟ್ಟಳು. ಮತ್ತೆ ತಡೆದೆ. ಬಿಗಿ ಮುಷ್ಟಿಯಲ್ಲಿದ್ದ ನಾಲ್ಕಾಣೆಯನ್ನು ತೋರಿಸುತ್ತ ‘ಇದನ್ನು ಕೊಟ್ಟರೆ ವಾಪಸ್ ಹೋಗುವೆಯಾ’ ಎಂದು ಕೇಳಿದೆ. ಆಕೆ ಕೃತಜ್ಞತೆಯಿಂದ ತೆಗೆದುಕೊಂಡು ಮನೆಯ ದಾರಿ ಹಿಡಿದಳು. ಆ ನಾಲ್ಕಾಣೆಯನ್ನು ಖರ್ಚು ಮಾಡಿದೆನೆಂದು ಭಾವಿಸಿ ತಾಯಿ ಬಡಿದದ್ದು ನೋವೆನಿಸಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 58ನೇ ಕಂತು ನಿಮ್ಮ ಓದಿಗೆ.

Read More

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ