Advertisement

Tag: kendasampige

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ