Advertisement

Tag: kendasampige

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ದಡ ಮುಟ್ಟದ ದೋಣಿಗಳಲ್ಲಿ ಕೂತು…

ಒಂದಾದ ನಂತರ ಒಂದರಂತೆ ಮೂರು ಮಕ್ಕಳನ್ನು ಮಾಡಿಕೊಂಡು ನಂತರ ತಮ್ಮತಮ್ಮ ಕೆಲಸ, ಕಾರ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇವಲ ಒಂದು ದಿನದ ಹಿಂದೆ ಮಾತಾಡಿದ್ದಷ್ಟೇ ಅಲ್ಲ, ಮನೆಗೆ ಬಂದು ಸಹಾಯ ಮಾಡಬೇಕು ಎಂದು ನನ್ನನ್ನು ದುಂಬಾಲುಬಿದ್ದ ಅಪ್ಪಟ ಶ್ರೀಸಂಸಾರಿಯಂತೆ ಕಾಣುವ ವಿನಯ, ಅಲಿಶಾ ಜತೆ ನಿಜವಾಗಿಯೂ ಒಂದು ಬದ್ಧ ಸಂಬಂಧದಲ್ಲಿದ್ದಾನೆಯೇ?
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್”ನ ಆರನೆಯ ಕಂತು ನಿಮ್ಮ ಓದಿಗಾಗಿ

Read More

ಊರು ಬಿಟ್ಟವರ ಹಾಡುಪಾಡು

ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್‌ ಪೊನ್ನಾಚಿ ಬರಹ

Read More

ಇವತ್ತಿನಿಂದ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು”

ಒಂದು ಭಾಷಣದ ಶೈಲಿಯಾಗಿ ಕೂಡ ಅಲವತ್ತುಕೊಳ್ಳುವಿಕೆ ಪರಿಣಾಮಕಾರಿಯಾದದ್ದು. ನೀವು ಸುಮ್ಮನೆ ಬೈದು ಭಾಷಣ ಮಾಡಿದರೆ, ವಿರೋಧಪಕ್ಷದ ನಾಯಕರಾಗಲು ಸಾಧ್ಯವಾಗುವುದಿಲ್ಲ. ದೇಶದ ಭವಿಷ್ಯ ಕುರಿತು, ಆಳುವಪಕ್ಷವನ್ನು ಕುರಿತು ಭೀಕರ ಭವಿಷ್ಯವನ್ನು ನುಡಿಯಬೇಕು.
ಕತೆಗಾರ ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಪ್ರಬಂಧಗಳ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ