Advertisement

Tag: kendasampige

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

Read More

ಮೆಳ್ಳಿಗೇರಿ ಸರ್‌ ಸಲುವಾಗಿ ಶಾಲೆಯನ್ನೇ ಬದಲಾಯಿಸಿದ್ದೆ!

ವಿದ್ಯಾರ್ಥಿಗಳನ್ನು ನಾಲ್ಕು ಗುಂಪಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಬ್ಬೊಬ್ಬ ಗಣಿತ ಪರಿಣತ ವಿದ್ಯಾರ್ಥಿಯನ್ನು ನಾಯಕನನ್ನಾಗಿ ಮಾಡಿದ್ದರು. ನನಗೆ ಒಂದು ಗುಂಪಿನ ಜಬಾಬ್ದಾರಿ ಕೊಟ್ಟಿದ್ದರು. ದೊಡ್ಡದಾಗಿರುವ ಮನೆಯ ಸಹಪಾಠಿಗಳ ಕೋಣೆಯೊಂದರಲ್ಲಿ ರಾತ್ರಿ ಕುಳಿತು ಗಣಿತ ಬಿಡಿಸುತ್ತಿದ್ದೆವು. ಅಲ್ಲೇ ಮಲಗಿ ಬೆಳಿಗ್ಗೆ ಮನೆಗೆ ಹೋಗುತ್ತಿದ್ದೆವು. ಹೀಗೆ ಸಹಪಾಠಿಗಳ ಮನೆಗೆ ಹೋಗಿ ಪಾಠ ಹೇಳುವುದನ್ನು ಮೊದಲಿನಿಂದಲೂ ಮಾಡುತ್ತಿದ್ದೆ. ಶ್ರೀಮಂತ ಹುಡುಗರ ತಾಯಂದಿರು ಬಡ ಹುಡುಗನ ತಾಯಿಯ ಮನೆಗೆ ಬಂದು “ಇವತ್ತು ನಿಮ್ಮ ಮಗನನ್ನು ನಮ್ಮ ಮನೆಗೆ ಕಳಿಸಿರಿ” ಎಂದು ಕೇಳುವುದು ನನಗೆ ಖುಷಿ ಕೊಡುತ್ತಿತ್ತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ