Advertisement

Tag: kendasampige

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ತೀರಿಹೋದವರನ್ನು ಕುರಿತು ಮಾತು ಬೇಕೆ?

ತೀರಿಹೋದವರನ್ನು ಎಷ್ಟು ನೆನಸಿಕೊಳ್ಳಬೇಕು, ಹೇಗೆ, ಯಾವಾಗ ನೆನಸಿಕೊಳ್ಳಬೇಕು ಎಂಬುದು ಒಂದು ಕಲೆ, ವಿಜ್ಞಾನ ಮತ್ತು ಕೈಗಾರಿಕೆ. ಸದ್ಯವನ್ನೇ ತೆಗೆದುಕೊಳ್ಳಿ. ಗಾಂಧಿ, ನೆಹರು, ಸಾವರ್ಕರ್‌, ಟಿಪ್ಪು, ಇವರನ್ನೆಲ್ಲ ಹೇಗೆ, ಎಷ್ಟು ನೆನಸಿಕೊಳ್ಳಬೇಕು, ಎಷ್ಟು ಮರೆಯಬೇಕು, ಇವರ ಬಗ್ಗೆ ಎಷ್ಟು, ಯಾವ ಮಾತನಾಡಬೇಕು ಎಂದು ನಮಗೆಲ್ಲ ಪಾಠ ಹೇಳಿ ಕೊಡಲು ಜ್ಞಾನವಂತರ ಎಷ್ಟು ದೊಡ್ಡ ಪಡೆಯೇ ಇದೆ. ಶ್ರಾದ್ಧ ಕರ್ಮಗಳನ್ನು ಮಾಡಿಸುವ ಪುರೋಹಿತರ ಸಂಖ್ಯೆಗಿಂತ ಈ ಪಡೆಯಲ್ಲೇ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ