Advertisement

Tag: kendasampige

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಲೆನಿನ್‌ಗ್ರಾಡ್‌ನಲ್ಲಿ ತಿರುಗಾಡಿದ ನೆನಪುಗಳು…

ಗಲೀನಾ ಹೇಳಿದ ಮೊದಲ ಪ್ರಸಂಗವೆಂದರೆ ತಾಯಿಯೊಬ್ಬಳು ತನ್ನ ಕೂಸನ್ನು ನೀರಲ್ಲಿ ಮುಳುಗಿಸಿದ ಹೃದಯವಿದ್ರಾವಕ ಘಟನೆ. ಹಿಟ್ಲರನ ಸೈನ್ಯ ಸೋವಿಯತ್ ದೇಶದ ಹಳ್ಳಿಯೊಂದನ್ನು ಸುತ್ತುವರಿದಿತ್ತು. ರಾತ್ರಿಯ ಗಾಢಾಂಧಕಾರ ಕಳೆದ ಕೂಡಲೆ ಆ ದಟ್ಟ ಅರಣ್ಯದ ಮಧ್ಯದಲ್ಲಿನ ಹಳ್ಳಿಯ ಮೇಲೆ ಬೆಳಗಿನ ಜಾವ ದಾಳಿ ಮಾಡುವ ಯೋಜನೆಯನ್ನು ಹಿಟ್ಲರನ ಸೈನ್ಯ ರೂಪಿಸಿತ್ತು. ಈ ಸುದ್ದಿ ಗೊತ್ತಾಗಿದ್ದರಿಂದ ಆ ಹಳ್ಳಿಗರು ರಾತ್ರಿಯೆ ಹಳ್ಳಿಯನ್ನು ಬಿಟ್ಟು ಬೇರೆಕಡೆ ಹೋಗಬೇಕಿತ್ತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆಯ ಸರಣಿ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಕನ್ನಡಕ್ಕೆ ಮತ್ತೊಂದು ಗರಿ ʻಹದಿನೇಳೆಂಟುʼ

ಹರಿ ಒಬ್ಬ ಸದ್ಗುಣ ಯುವಕನೇ ಆಗಿದ್ದರೂ ಅರಿವಿನ ಕೊರತೆಯಿಂದ ಆ ವಿಡಿಯೋವನ್ನು ತನ್ನ ಸ್ನೇಹಿತರಿಗೆ ತೋರಿಸಿ ಅದು ತನ್ನ ಸಾಧನೆ ಎಂಬಂತೆ ಬಿಂಬಿಸಿಕೊಂಡ. ಅಲ್ಲಿಗೆ ಸುಮ್ಮನಾಗದೇ, ತನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ತನ್ನ ದೇಹವನ್ನೇ ಹಂಚಿಕೊಂಡ ದೀಪಾಳಿಗೆ ಅದರಿಂದ ಏನಾದೀತು ಎನ್ನುವ ಸಾಮಾನ್ಯ ವಿವೇಚನೆಯನ್ನೂ ಮಾಡದೇ ಆ ವಿಡಿಯೋವನ್ನು ಒಬ್ಬ ಫೇಸ್‌ಬುಕ್‌ಸ್ನೇಹಿತನೊಂದಿಗೆ ಹಂಚಿಕೊಂಡ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ಮತ್ತೊಂದು ಚಲನಚಿತ್ರ ʻಹದಿನೇಳೆಂಟುʼ ಕುರಿತು ಕುಮಾರ ಬೇಂದ್ರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ