Advertisement

Tag: kendasampige

ಕನ್ನಡಕ್ಕೆ ಮತ್ತೊಂದು ಗರಿ ʻಹದಿನೇಳೆಂಟುʼ

ಹರಿ ಒಬ್ಬ ಸದ್ಗುಣ ಯುವಕನೇ ಆಗಿದ್ದರೂ ಅರಿವಿನ ಕೊರತೆಯಿಂದ ಆ ವಿಡಿಯೋವನ್ನು ತನ್ನ ಸ್ನೇಹಿತರಿಗೆ ತೋರಿಸಿ ಅದು ತನ್ನ ಸಾಧನೆ ಎಂಬಂತೆ ಬಿಂಬಿಸಿಕೊಂಡ. ಅಲ್ಲಿಗೆ ಸುಮ್ಮನಾಗದೇ, ತನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ತನ್ನ ದೇಹವನ್ನೇ ಹಂಚಿಕೊಂಡ ದೀಪಾಳಿಗೆ ಅದರಿಂದ ಏನಾದೀತು ಎನ್ನುವ ಸಾಮಾನ್ಯ ವಿವೇಚನೆಯನ್ನೂ ಮಾಡದೇ ಆ ವಿಡಿಯೋವನ್ನು ಒಬ್ಬ ಫೇಸ್‌ಬುಕ್‌ಸ್ನೇಹಿತನೊಂದಿಗೆ ಹಂಚಿಕೊಂಡ!
ಈ ವರ್ಷದ ಪನೋರಮಕ್ಕೆ ಆಯ್ಕೆಯಾದ ಮತ್ತೊಂದು ಚಲನಚಿತ್ರ ʻಹದಿನೇಳೆಂಟುʼ ಕುರಿತು ಕುಮಾರ ಬೇಂದ್ರೆ ಬರಹ

Read More

ನಮ್ಮಲ್ಲೇ ಮೊದಲು… ಅಂತರ್ವೀಕ್ಷಣೆ…!

ನಮ್ಮಂತಹ ಎಳೆಯ ಹುಡುಗರಿಗೆ ಬಸ್ಸಿನಲ್ಲಿ ಹೋಗುವ ಸಂದರ್ಭಗಳು ಬಂತೆಂದರೆ ಎಲ್ಲಿಲ್ಲದ ಆನಂದ. ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಹೋಗುವ ಬಸ್ಸಿಗಾಗಿ ಬಸ್ ಸ್ಟ್ಯಾಂಡ್ ನಲ್ಲಿ ಒಂದರ್ಧ ಗಂಟೆ ಮುಂಚೆಯೇ ಬಂದು, ಅದಕ್ಕಾಗಿ ಕಾಯುತ್ತ ನಿಲ್ಲುತ್ತಿದ್ದೆವು. ಮಲೆನಾಡಿನ ದಾರಿಯಲ್ಲಿ ಬರುವ ಬಸ್ಸಿನ ಪ್ರತಿಧ್ವನಿಯನ್ನು ಆಲಿಸುತ್ತ ಕಾಯುತ್ತಿದ್ದೆವು. ಮೂರು ನಾಲ್ಕು ಕಿ.ಮಿ ಮೊದಲೇ ಇದು ಇಲ್ಲಿಬರುತ್ತಿದೆ ಎಂದು ರೆಡಾರ್ ನಂತೆ ಹೇಳುವುದಕ್ಕೆ ಸಾಧ್ಯವಾಗುವುದು ನಮಗೆ ಮಾತ್ರ.
ನಾಳೆ ರವಿ ಮಡೋಡಿ ಬರೆದ “ನಮ್ಮಲ್ಲೇ ಮೊದಲು” ಲಘು ಬರಹಗಳ ಸಂಕಲನ ಹಾಗೂ ಪೂರ್ಣಿಮಾ ಹೆಗಡೆ ಬರೆದ “ಅಂತರ್ವೀಕ್ಷಣೆ” ಗೀತಾ ಕಥಾಯಾನ ಕೃತಿಗಳು ಬಿಡುಗಡೆಗೊಳ್ಳಲಿದ್ದು, ಎರಡೂ ಕೃತಿಗಳ ಆಯ್ದ ಭಾಗಗಳನ್ನು ನಿಮ್ಮ ಓದಿಗಾಗಿ ಇಲ್ಲಿ ಹಂಚಿಕೊಳ್ಳಲಾಗಿದೆ.

Read More

ಫ್ಲೈಟ್ ತಪ್ಪಿಸಿದ ಮೆಹೆಂದಿ ಮತ್ತು ನಾನು

ಯುವತಿಯೊಬ್ಬಳ ಭಾರೀ ಕನ್ನಡಕದಿಂದ ಪ್ರೇರಿತರಾದ ನಾವು ತಂಪು ಕನ್ನಡಕವನ್ನು ಹುಡುಕಿ ಹಾಕಿಕೊಂಡವು. ತಲೆಯನ್ನೊಮ್ಮೆ ನೇವರಿಸಿಕೊಳ್ಳಬೇಕೆಂದಾಗಲೇ ನಮಗೆ ಹೊಳೆದದ್ದು ನಮ್ಮ ತಲೆಯ ಮೆಹೆಂದಿಗೆ ಜಲಭಾಗ್ಯ ಕರುಣಿಸಿಲ್ಲವೆಂದು. ಅಷ್ಟರಲ್ಲಾಗಲೇ ನಮ್ಮ ಕೈಗೆ ಬೋರ್ಡಿಂಗ್ ಪಾಸ್ ದೊರೆಯಿತು. ಯಾವ ಲೌಂಜಿನಲ್ಲಿ ಕುಳಿತುಕೊಳ್ಳಬೇಕೆಂಬ ವಿವರ ಪಡೆದುಕೊಂಡೆವು. ಹಾಗೆ ಅತ್ತಿಗೆ ನಾದಿನಿಯರಿಬ್ಬರೂ ಒಬ್ಬರ ಮುಖವನ್ನೊಮ್ಮೆ ನೋಡಿಕೊಂಡೆವು… ನಗು ಬರಲಿಲ್ಲ. ನಮ್ಮ ಅವಾಂತರಕ್ಕೆ ಸಿಟ್ಟು ಬರುತ್ತಿತ್ತು. ಲೌಂಜಿನಲ್ಲೊಮ್ಮೆ ನಮ್ಮ ಲಗೇಜನ್ನು ಕುಕ್ಕರಿಸಿ ವಾಶ್ ರೂಮಿಗೆ ದೌಡಿಟ್ಟೆವು.
ಸುಮಾವೀಣಾ ಬರೆದ ಅನುಭವ ಕಥನ ನಿಮ್ಮ ಓದಿಗೆ

Read More

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ