Advertisement

Tag: kendasampige

ಎಲ್ಲಿ ಹೋದರೇನು… ಮನ ಮರೆಯುವುದಿಲ್ಲ ನಿನ್ನನು

ಚಾಲಕ ಖಾನ್ ಅಲ್ಲಿಂದ ಒಂದು ಗಂಟೆ ಐದು ನಿಮಿಷಗಳ ಪ್ರಯಾಣದಲ್ಲಿ ತಲುಪಿಸಿದ್ದು ನೀರ್ದೇವನ ಪಾದಕ್ಕೆ. ಒಂದು ಬದಿ ಪ್ರಪಾತ ಮತ್ತೊಂದು ಬದಿ ಸಮುದ್ರ… ನಡುವೆ ಈ ನೀರ್ಮಕ್ಕಳ ಕಾಯ್ವ ದೇವನ ಪಳಿಯುಳಿಕೆ. ಸೂರ್ಯ ಮುಳುಗುತ್ತಿದ್ದ, ಬಂದಿದ್ದವರು ವಿಧವಿಧ ಭಂಗಿಯಲ್ಲಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ಜೋರು ಗಾಳಿ, ತಂಪು ಸಮಯ ಸಮುದ್ರ ನೋಡುತ್ತಾ ಕೂರಲು ಒಂಟಿ ನಿಂತ ಸಣ್ಣ ಬಂಡೆ. ಅದೆಷ್ಟು ಚಂದಿತ್ತು ಅಲ್ಲಿ ಕೂತು ಇಹಪರವನ್ನು ಮರೆತಿದ್ದು. ಸಾಯಂಕಾಲ 6 ಗಂಟೆಯ ನಂತರ ಅಲ್ಲಿ ಇರಲು ಬಿಡುವುದಿಲ್ಲ.
ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಗ್ರೀಸ್‌ ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ ಅಂಜಲಿ ರಾಮಣ್ಣ ಬರಹ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

Read More

ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ

ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್‌ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್‌ನಲ್ಲಿ ಮೆನನ್‌ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ