Advertisement

Tag: kendasampige

ಧೋಲ್ಕಲ್ ಗಣೇಶನಿಗಾಗಿ ಬೆಟ್ಟ ಹತ್ತಿಯೇಬಿಟ್ಟೆ!

ಅಲ್ಲಿಂದ ಸ್ವಲ್ಪ ದೂರ ಸೂರ್ಯನ ಕಿರಣ ಬಿದ್ದು, ಗಾಳಿಯೂ ಸೋಕಿ ತುಸು ದಣಿವು ಕಡಿಮೆಯಾಯಿತು. ಮತ್ತೆ ಮುಂದುವರೆದಂತೆ ತುಸು ಇಳಿಜಾರಿಗೆ ಸಾಗಿದ ದಾರಿ ಮತ್ತೆ ಸ್ವಲ್ಪ ಹೆಚ್ಚೇ ಏರುಹಾದಿಯಲ್ಲಿ ಕರೆದುಕೊಂಡುಹೋಯಿತು. ಅದು ತಲುಪಿದ್ದು ದೊಡ್ಡ ದೊಡ್ಡ ಬಂಡೆಗಳ ಬಳಿ. ಅಲ್ಲಿಂದ ಮುಂದೆ ಯಾವ ದಾರಿಯಿರಲಿಲ್ಲ. ಹತ್ತೋಕೆ ಆಗುತ್ತೋ ಇಲ್ವೋ ಅನ್ನೋ ಹಾಗಿದ್ದ ಬಂಡೆಗಳು. ಇಲ್ಲಿಂದ ಮುಂದೆ ಮುಂದಿನ ೨೦೦—೩೦೦ ಮೀಟರಿನ ದಾರಿ ತುಸು ಕಠಿಣವಾಗೇ ಇತ್ತು. ಹೆಜ್ಜೆ ಇಡೋದರಲ್ಲಿ ಸ್ವಲ್ಪ ಹೆಚ್ಚುಕಡಿಮೆಯಾದರೂ ಒಂದು ನಾಲ್ಕು ಮೂಳೆಗಳು ರಿಪೇರಿಗೆ ಹೋಗೋದು ಗ್ಯಾರಂಟಿ. ಅಲ್ಲಿಂದಲೂ ಗಣೇಶ ಏನೂ ಕಾಣಿಸುತ್ತಿರಲಿಲ್ಲ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್‌ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.

Read More

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ