Advertisement

Tag: kendasampige

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

Read More

ನೆದರ್ಲ್ಯಾಂಡ್ಸ್ ನೆನಪು: ಕಂದಪುಷ್ಪದ ಕಥೆ

ಟುಲಿಪ್ ಹೂವು ಒಂದು ಪದರದ ಹೂವು. ಮೊಗ್ಗಾಗಿದ್ದಾಗ ಅಷ್ಟು ವಿಶೇಷವಾಗಿ ಕಾಣುವುದಿಲ್ಲ. ಪೂರ್ಣ ಅರಳಿ, ದಳಗಳು ತೆರೆದರೂ ಅಷ್ಟು ವಿಶೇಷ ಅನ್ನಿಸುವುದಿಲ್ಲ. ಅರಳುವ ಹಂತಗಳಲ್ಲಿ ಬಹಳ ಸುಂದರವಾಗಿ ಕಾಣುವುದು ಇವೆರಡರ ಮಧ್ಯದ “ಬಲ್ಬ್” ಹಂತ. ಟುಲಿಪ್ ಬಲ್ಬ್ ಗಳ ಅವಧಿ ಎರಡರಿಂದ ಮೂರೂ ವಾರಗಳು ಅಷ್ಟೇ. ಸಂಪೂರ್ಣ ಅರಳುವ ಪ್ರಕ್ರಿಯೆ ಆಯಾ ವರ್ಷದ ಚೈತ್ರ ಕಾಲದ ಹವಾಮಾನಕ್ಕೆ ತಕ್ಕಂತೆ ಒಂದೆರೆಡು ವಾರ ಅತ್ತಿಂದಿತ್ತ ಬದಲಾಗುತ್ತಿರುತ್ತದೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಹಾಯ್‌ ಅಂಗೋಲಾ!

ಅಂಗೋಲಾದ ಜನರ ಬಗ್ಗೆ ಹೇಳುವುದು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವುದು, ಅಲ್ಲಿನ ಊಟ ತಿಂಡಿ ಬಗ್ಗೆ ಹೇಳುವುದು ಇದೆಲ್ಲಾ ಸಹಜ. ನಿರೂಪಣೆ ಅದ್ಭುತವಾಗಿದೆ, ಹೊಸ ವಿಷಯ ತಿಳಿಯುತ್ತದೆ ಎಲ್ಲಾ ನಿಜವೇ. ಆದರೆ ಅತ್ಯಂತ ವಿಶಿಷ್ಟವಾದ ಅಧ್ಯಾಯವಿದೆ. ಮೊದಲ ಬಾರಿ ಓದಿದಾಗ ಬಹಳ ವಿಚಿತ್ರ ಅನ್ನಿಸಿತ್ತು‌. ಒಂದು ಕ್ಷೌರ ಮಾಡಿಸಿಕೊಳ್ಳಲು ಮುನ್ನೂರು ಕಿಲೋಮೀಟರ್ ಪ್ರಯಾಣಿಸಬೇಕಾಗಿದ್ದ ಪ್ರಸಾದರ ಅವಸ್ಥೆ ಬಗ್ಗೆ ಕೇಳಿದಾಗ ನಗುವುದೋ ಅಳುವುದೋ ಗೊತ್ತಾಗುವುದಿಲ್ಲ. ಆಫ್ರಿಕನ್ನರ ಕೂದಲ ರೀತಿಗೂ ಭಾರತೀಯರ ಕೂದಲ‌ ರೀತಿಗೂ ಅಜಗಜಾಂತರ ವ್ಯತ್ಯಾಸವಿರುವುದು ಗೊತ್ತಿರುವ ಸಂಗತಿ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ