Advertisement

Tag: kendasampige

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ