Advertisement

Tag: kendasampige

ಚಿತೆಯ ಜೊತೆ ಚಿತೆಯಾಗಿದ್ದೆ

ಆ ಹೆಂಗಸು ನನ್ನತ್ತ ಎರಡು ಮೂರು ಬಾರಿ ನೋಡಿತು. ಅವಳ ಕಣ್ಣಲ್ಲಿದ್ದ ನೀರೆಲ್ಲ ತೀರಿ ಹೋಗಿದ್ದವೇನೊ! ಸ್ಮಶಾನದ ಮೂಲೆಯಲ್ಲಿ ಶವದತ್ತ ನೋಡುತ್ತಲೇ ಕೂತು ಕೂಸಿಗೆ ಎದೆ ಕಚ್ಚಿಸಿದ್ದಳು. ಆ ಕೂಸಿನ ಹೆಜ್ಜೆಗಳಿನ್ನೂ ಮೂಡಿಯೇ ಇಲ್ಲಾ… ಅವನು ನಡೆ ನಡತೆ ನುಡಿಗಳ ಮುಗಿಸಿದ್ದ. ಆ ಹೆಂಗಸಿನ ಹೆಜ್ಜೆಗಳು ಬಾಕಿ ಇದ್ದವು. ಸ್ಮಶಾನ ಬಿಟ್ಟು ಬೇಗ ಮನೆಗೆ ತೆರಳಲು ಮುಂದಾಗಿದ್ದರು. ಸ್ಮಶಾಸನದಲ್ಲಿ ಸಂಸಾರವೇ! ಆಕೆಯೂ ಆ ಜನರ ಜೊತೆ ಎದ್ದು ಹೊರಟಳು ಏನೂ ಆಗಿಯೇ ಇಲ್ಲ ಎಂಬಂತೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 38ನೇ ಕಂತು

Read More

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಚೆಗೆವಾರನನ್ನು ನೆನಪಿಸುವ ʻಮೋಟಾರ್ ಸೈಕಲ್ ಡೈರೀಸ್ʼ

1952ರಲ್ಲಿ ಅದೊಂದು ದಿನ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಒಂದಾದ ಅರ್ಜಂಟೀನಾದಲ್ಲಿ ಮೆಡಿಕಲ್ ಓದುತ್ತಿದ್ದ ಸ್ನೇಹಿತರಾದ ಅರ್ನೆಸ್ಟೋ ಚೆಗೆವಾರ ಮತ್ತು ಆಲ್ಬರ್ಟೋ ಗ್ರೆನಾಡೋಗೆ ಒಂದು ಅಪೂರ್ವವಾದ ಉಮೇದು ಉಂಟಾಗುತ್ತದೆ. ಅದು ಎಂಥವರನ್ನೂ ಬೆಚ್ಚಿಬೀಳಿಸುವಂಥಾದ್ದು. ಸುಮಾರು ಎಂಟು ಸಾವಿರ ಮೈಲಿ ವಿಸ್ತಾರದ ಇಡೀ ದಕ್ಷಿಣ ಅಮೆರಿಕವನ್ನು 1939ನೇ ಮಾಡೆಲ್ಲಿನ ಮೋಟಾರ್ ಬೈಕಿನಲ್ಲಿ ಸುತ್ತಾಡಿಕೊಂಡು ಬರಬೇಕು, ಎಂದು. ಹಾಗೆಂದೇ ಪ್ರಯಾಣ ಹೊರಟ ಗೆಳೆಯರಿಬ್ಬರ ಸ್ವಭಾವ, ನಡವಳಿಕೆ ಒಂದಕ್ಕೊಂದು ತಾಳಮೇಳವಿಲ್ಲದ್ದು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಬ್ರೆಜಿ಼ಲ್‌ನ ʻಮೋಟಾರ್ ಸೈಕಲ್ ಡೈರೀಸ್ʼ ಸಿನಿಮಾದ ವಿಶ್ಲೇಷಣೆ

Read More

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ