Advertisement

Tag: kendasampige

ಮಡಿವಂತಿಕೆಯ ರಂಗಸ್ಥಳದಲ್ಲಿ ಹೊಸ ಪ್ರಸಂಗಗಳ ಗ್ರಹಿಕೆ

ಹೊಸ ಪ್ರಸಂಗಗಳ ಬಗ್ಗೆ ಸಾಮಾನ್ಯವಾಗಿ ಒಂದು ಸೀಮಿತ ಗ್ರಹಿಕೆಯಿರುತ್ತದೆ. ಯಕ್ಷಗಾನವೆಂದರೆ ಅದು ಹಳೆಯ ಕಲೆ, ಅದಕ್ಕೆ ನೂರಾರು ವರ್ಷಗಳ ಪರಂಪರೆಯಿದೆ. ಅದು ಪುರಾಣ ಕತೆಗಳ ಮೌಲ್ಯ ಪ್ರಸಾರಕ್ಕಾಗಿದೆ, ನಮ್ಮ ಜೀವನಕ್ಕೆ ಬೇಕಾಗುವ ಮೌಲ್ಯವೇ ಪುರಾಣಗಳಲ್ಲಿವೆ ಮತ್ತು ಹಳೆಯದೆಲ್ಲವನ್ನು ರಕ್ಷಿಸಬೇಕು ಎನ್ನುವ ನಂಬಿಕೆಯಿಂದಾಗಿ. ಜೊತೆಗೆ ಅದೊಂದು ಗಂಭೀರವಾದ ಕಲೆ ಎನ್ನುವ ದೃಷ್ಟಿಕೋನವೂ ಸೇರಿಕೊಂಡಿದೆ. ಗಂಭೀರವೆಂದರೆ ರಂಜನೆಯಿಲ್ಲದ್ದು ಅನ್ನುವುದು ಒಮ್ಮೊಮ್ಮೆ ಅವರ ಮಾತುಗಳಲ್ಲಿ ಧ್ವನಿಸುತ್ತದೆ. ಇವೆಲ್ಲ ನಂಬಿಕೆಗಳು ವಸಾಹತಿನ ಕಾಲದಲ್ಲಿ ಹುಟ್ಟಿದ ರಾಷ್ಟ್ರೀಯತೆಯ ಕಲ್ಪನೆಯೊಟ್ಟಿಗೆ ಬಂದದ್ದೆಂದು ಕಾಣುತ್ತದೆ. ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ. 

Read More

ಬ್ಯಾಗಡಿ ಕವರಲ್ಲಿ ಮಡಸಿಟ್ಟಿದ್ದ ಸೀರೆಗಳಂತ ಕನಸು

ಕಟ್ರಗುಳ್ಳಿ ಕಲ್ಲು ಎಂದು ಯಮುನಿಯ ಬಾಯಲ್ಲಿ ನಾಮಕರಣ ಮಾಡಿಸಿಕೊಂಡಿದ್ದ ಟಾರು ರೋಡಿನ ಒತ್ತುವ ಹರಳುಗಳನ್ನು ಬರಿಗಾಲಲ್ಲಿ ತುಳಿಯುತ್ತ ಅಜ್ಜಿ ಮೊಮ್ಮಗಳಿಬ್ಬರು ಬಟ್ಟೆಯಂಗಡಿಗೆ ಕಾಲಿಟ್ಟರು. ಕಸಬರಿಗೆಯಲ್ಲಿ ಕಸವಡೆದು ಬಯಲುಸೀಮೆಯ ಮಳೆಯ ಕಂತ್ರಾಟ ಗೊತ್ತಿದ್ದ ಅಂಗಡಿಯ ಹುಡುಗ ಯಾವುದಕ್ಕೂ ಇರಲಿ ಎಂದು ಅಂಗಡಿ ಮುಂದಿನ ಬಯಲಿಗೆ ನಾಲ್ಕು ಚೊಂಬು ನೀರುಗ್ಗುವ ಶಾಸ್ತ್ರ ಮಾಡುತ್ತಿದ್ದ. ಶೇಟಿ ಲಕ್ಷ್ಮಿ ಫೋಟೋಗೆ ಊದಿನಕಡ್ಡಿ ಬೆಳಗಿ ಕೈಮುಗಿಯುವ ತರಾತುರಿಯಲ್ಲಿದ್ದವನು ಇವರನ್ನು ನೋಡಿ ಐದು ಮಿನಟ್ ಕೂತ್ಗಳ್ರಿ ಎಂದು ತನ್ನ ಪೂಜಾ ಸಿದ್ಧತೆಯನ್ನು ಮುಂದುವರೆಸಿದ. ಇವರು ಬೇರೆ ಆಯ್ಕೆಯೇ ಇಲ್ಲದಂತೆ ಕಾಯುತ್ತ ನಿಂತರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣ

Read More

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇರಾನ್‌ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ