Advertisement

Tag: kendasampige

ತಾಷ್ಕೆಂಟ್‌ಗೆ ವಿದಾಯ

ಯುದ್ಧದ ಹಿಂಸೆ ಮತ್ತು ಅಸಹಾಯಕತೆಯನ್ನು ಸಹಿಸುತ್ತ, ಸಾವು ನೋವು ಅನುಭವಿಸುತ್ತ ಮುನ್ನಡೆಯುವ ಛಲ ಲೋಕದ ಜನಸಮುದಾಯಗಳಿಗೆ ಅದು ಹೇಗೆ ಬರುವುದೊ! ಬಹುಶಃ ಅನುಭವಿಸಿದಾಗಲೇ ಗೊತ್ತಾಗುವುದು. ಇದೇ ಉಜ್ಬೆಕಿಸ್ತಾನ ಮೂಲದ ಮೊಘಲ ಸಂತತಿಯ ಔರಂಗಜೇಬ್, ನನ್ನ ಜನ್ಮಸ್ಥಳ ವಿಜಯಪುರದ ಮೇಲೆ ದಂಡೆತ್ತಿ ಬಂದು ಆದಿಲಶಾಹಿ ಸಾಮ್ರಾಜ್ಯವನ್ನು ಹಾಳುಗೆಡವಿದ. ಅನೇಕ ಸೂಫಿಸಂತರ ಕೊಲೆ ಮಾಡಿದ. ಯುದ್ಧದಲ್ಲಿ ಯಾರು ಮುಸ್ಲಿಮರು? ಯಾರು ಹಿಂದುಗಳು? ಯಾರು ಕ್ರೈಸ್ತರು? ಯುದ್ಧದಲ್ಲಿ ಧರ್ಮವಿಲ್ಲ, ನೀತಿಯಿಲ್ಲ, ನ್ಯಾಯವಿಲ್ಲ. ಅದು ಕೇವಲ ಯುದ್ಧ. ಗೆದ್ದವರನ್ನೂ ಆರ್ಥಿಕವಾಗಿ ಮತ್ತು ನೈತಿಕವಾಗಿ ಸೋಲಿಸುವ ಯುದ್ಧ.
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ 47ನೇ ಕಂತು ಇಲ್ಲಿದೆ.

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ಚಿತೆಯ ಜೊತೆ ಚಿತೆಯಾಗಿದ್ದೆ

ಆ ಹೆಂಗಸು ನನ್ನತ್ತ ಎರಡು ಮೂರು ಬಾರಿ ನೋಡಿತು. ಅವಳ ಕಣ್ಣಲ್ಲಿದ್ದ ನೀರೆಲ್ಲ ತೀರಿ ಹೋಗಿದ್ದವೇನೊ! ಸ್ಮಶಾನದ ಮೂಲೆಯಲ್ಲಿ ಶವದತ್ತ ನೋಡುತ್ತಲೇ ಕೂತು ಕೂಸಿಗೆ ಎದೆ ಕಚ್ಚಿಸಿದ್ದಳು. ಆ ಕೂಸಿನ ಹೆಜ್ಜೆಗಳಿನ್ನೂ ಮೂಡಿಯೇ ಇಲ್ಲಾ… ಅವನು ನಡೆ ನಡತೆ ನುಡಿಗಳ ಮುಗಿಸಿದ್ದ. ಆ ಹೆಂಗಸಿನ ಹೆಜ್ಜೆಗಳು ಬಾಕಿ ಇದ್ದವು. ಸ್ಮಶಾನ ಬಿಟ್ಟು ಬೇಗ ಮನೆಗೆ ತೆರಳಲು ಮುಂದಾಗಿದ್ದರು. ಸ್ಮಶಾಸನದಲ್ಲಿ ಸಂಸಾರವೇ! ಆಕೆಯೂ ಆ ಜನರ ಜೊತೆ ಎದ್ದು ಹೊರಟಳು ಏನೂ ಆಗಿಯೇ ಇಲ್ಲ ಎಂಬಂತೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 38ನೇ ಕಂತು

Read More

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ