Advertisement

Tag: kendasampige

ಚೆಗೆವಾರನನ್ನು ನೆನಪಿಸುವ ʻಮೋಟಾರ್ ಸೈಕಲ್ ಡೈರೀಸ್ʼ

1952ರಲ್ಲಿ ಅದೊಂದು ದಿನ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಒಂದಾದ ಅರ್ಜಂಟೀನಾದಲ್ಲಿ ಮೆಡಿಕಲ್ ಓದುತ್ತಿದ್ದ ಸ್ನೇಹಿತರಾದ ಅರ್ನೆಸ್ಟೋ ಚೆಗೆವಾರ ಮತ್ತು ಆಲ್ಬರ್ಟೋ ಗ್ರೆನಾಡೋಗೆ ಒಂದು ಅಪೂರ್ವವಾದ ಉಮೇದು ಉಂಟಾಗುತ್ತದೆ. ಅದು ಎಂಥವರನ್ನೂ ಬೆಚ್ಚಿಬೀಳಿಸುವಂಥಾದ್ದು. ಸುಮಾರು ಎಂಟು ಸಾವಿರ ಮೈಲಿ ವಿಸ್ತಾರದ ಇಡೀ ದಕ್ಷಿಣ ಅಮೆರಿಕವನ್ನು 1939ನೇ ಮಾಡೆಲ್ಲಿನ ಮೋಟಾರ್ ಬೈಕಿನಲ್ಲಿ ಸುತ್ತಾಡಿಕೊಂಡು ಬರಬೇಕು, ಎಂದು. ಹಾಗೆಂದೇ ಪ್ರಯಾಣ ಹೊರಟ ಗೆಳೆಯರಿಬ್ಬರ ಸ್ವಭಾವ, ನಡವಳಿಕೆ ಒಂದಕ್ಕೊಂದು ತಾಳಮೇಳವಿಲ್ಲದ್ದು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಬ್ರೆಜಿ಼ಲ್‌ನ ʻಮೋಟಾರ್ ಸೈಕಲ್ ಡೈರೀಸ್ʼ ಸಿನಿಮಾದ ವಿಶ್ಲೇಷಣೆ

Read More

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಮಡಿವಂತಿಕೆಯ ರಂಗಸ್ಥಳದಲ್ಲಿ ಹೊಸ ಪ್ರಸಂಗಗಳ ಗ್ರಹಿಕೆ

ಹೊಸ ಪ್ರಸಂಗಗಳ ಬಗ್ಗೆ ಸಾಮಾನ್ಯವಾಗಿ ಒಂದು ಸೀಮಿತ ಗ್ರಹಿಕೆಯಿರುತ್ತದೆ. ಯಕ್ಷಗಾನವೆಂದರೆ ಅದು ಹಳೆಯ ಕಲೆ, ಅದಕ್ಕೆ ನೂರಾರು ವರ್ಷಗಳ ಪರಂಪರೆಯಿದೆ. ಅದು ಪುರಾಣ ಕತೆಗಳ ಮೌಲ್ಯ ಪ್ರಸಾರಕ್ಕಾಗಿದೆ, ನಮ್ಮ ಜೀವನಕ್ಕೆ ಬೇಕಾಗುವ ಮೌಲ್ಯವೇ ಪುರಾಣಗಳಲ್ಲಿವೆ ಮತ್ತು ಹಳೆಯದೆಲ್ಲವನ್ನು ರಕ್ಷಿಸಬೇಕು ಎನ್ನುವ ನಂಬಿಕೆಯಿಂದಾಗಿ. ಜೊತೆಗೆ ಅದೊಂದು ಗಂಭೀರವಾದ ಕಲೆ ಎನ್ನುವ ದೃಷ್ಟಿಕೋನವೂ ಸೇರಿಕೊಂಡಿದೆ. ಗಂಭೀರವೆಂದರೆ ರಂಜನೆಯಿಲ್ಲದ್ದು ಅನ್ನುವುದು ಒಮ್ಮೊಮ್ಮೆ ಅವರ ಮಾತುಗಳಲ್ಲಿ ಧ್ವನಿಸುತ್ತದೆ. ಇವೆಲ್ಲ ನಂಬಿಕೆಗಳು ವಸಾಹತಿನ ಕಾಲದಲ್ಲಿ ಹುಟ್ಟಿದ ರಾಷ್ಟ್ರೀಯತೆಯ ಕಲ್ಪನೆಯೊಟ್ಟಿಗೆ ಬಂದದ್ದೆಂದು ಕಾಣುತ್ತದೆ. ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ. 

Read More

ಬ್ಯಾಗಡಿ ಕವರಲ್ಲಿ ಮಡಸಿಟ್ಟಿದ್ದ ಸೀರೆಗಳಂತ ಕನಸು

ಕಟ್ರಗುಳ್ಳಿ ಕಲ್ಲು ಎಂದು ಯಮುನಿಯ ಬಾಯಲ್ಲಿ ನಾಮಕರಣ ಮಾಡಿಸಿಕೊಂಡಿದ್ದ ಟಾರು ರೋಡಿನ ಒತ್ತುವ ಹರಳುಗಳನ್ನು ಬರಿಗಾಲಲ್ಲಿ ತುಳಿಯುತ್ತ ಅಜ್ಜಿ ಮೊಮ್ಮಗಳಿಬ್ಬರು ಬಟ್ಟೆಯಂಗಡಿಗೆ ಕಾಲಿಟ್ಟರು. ಕಸಬರಿಗೆಯಲ್ಲಿ ಕಸವಡೆದು ಬಯಲುಸೀಮೆಯ ಮಳೆಯ ಕಂತ್ರಾಟ ಗೊತ್ತಿದ್ದ ಅಂಗಡಿಯ ಹುಡುಗ ಯಾವುದಕ್ಕೂ ಇರಲಿ ಎಂದು ಅಂಗಡಿ ಮುಂದಿನ ಬಯಲಿಗೆ ನಾಲ್ಕು ಚೊಂಬು ನೀರುಗ್ಗುವ ಶಾಸ್ತ್ರ ಮಾಡುತ್ತಿದ್ದ. ಶೇಟಿ ಲಕ್ಷ್ಮಿ ಫೋಟೋಗೆ ಊದಿನಕಡ್ಡಿ ಬೆಳಗಿ ಕೈಮುಗಿಯುವ ತರಾತುರಿಯಲ್ಲಿದ್ದವನು ಇವರನ್ನು ನೋಡಿ ಐದು ಮಿನಟ್ ಕೂತ್ಗಳ್ರಿ ಎಂದು ತನ್ನ ಪೂಜಾ ಸಿದ್ಧತೆಯನ್ನು ಮುಂದುವರೆಸಿದ. ಇವರು ಬೇರೆ ಆಯ್ಕೆಯೇ ಇಲ್ಲದಂತೆ ಕಾಯುತ್ತ ನಿಂತರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ