Advertisement

Tag: kendasampige

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

`ಜಗದ ಜಗಲಿಯಲಿ ನಿಂತು’: ವೈಶಾಲಿ ಪ್ರವಾಸ ಲೇಖನ ಮಾಲೆ ಆರಂಭ

ಮಾಯಾ ಜನರ ಈ ಖಗೋಳಶಾಸ್ತ್ರದ ನಂಬಿಕೆ ಮತ್ತು ಅವಲಂಬನೆ ಎಷ್ಟರ ಮಟ್ಟಿಗಿತ್ತೆಂದರೆ ಅದು ಅವರ ಜೀವನದ ಪ್ರತಿ ನಡೆಯಲ್ಲೂ ಹಾಸುಹೊಕ್ಕಾಗಿತ್ತು. ಜಗತ್ಪ್ರಸಿದ್ದ ಮಾಯನ್ ಪಿರಾಮಿಡ್ “ಚಿಚೆನ್ ಇಟ್-ಸಾ” ಇದಕ್ಕೊಂದು ನಿದರ್ಶನ. ಇದು ಅವರ ಸರ್ಪದೇವತೆ ಕುಕುಲ್ಕಾನ್ ಮಂದಿರ. ಇಂದಿಗೂ ಇಕ್ವಿನಾಕ್ಸ್ ದಿನ ನಡುಮಧ್ಯಾಹ್ನ, ಸೂರ್ಯನ ನೆರಳು ಪಿರಮಿಡ್ಡಿನ ಮೇಲೆ ಹೇಗೆ ಬೀಳುತ್ತದೆಂದರೆ, ಸರ್ಪವೊಂದು ಮೇಲಿಂದ ಕೆಳಗೆ ಹರಿದಂತೆ ಕಾಣುತ್ತದೆ. ಆ ದೃಶ್ಯ ನೋಡಲು ಪ್ರತಿವರ್ಷ ಸಾವಿರಾರು ಜನ ಸೇರುತ್ತಾರೆ. ವೈಶಾಲಿ ಹೆಗಡೆ ಬರೆಯುವ ʻಜಗದ ಜಗಲಿಯಲಿ ನಿಂತುʼ ಅಂಕಣದ ಮೊದಲ ಬರಹ ಇಲ್ಲಿದೆ

Read More

ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇರಾನ್‌ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ