Advertisement

Tag: kendasampige

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು

ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ನಿಂಬೆಗಿಡಕ್ಕೇನು ಮನಸ್ಸಿದೆಯೇ?

ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್‌  ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್‌ ಪೊಲೀಸ್‌ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಮನದೊಳಗೆ ಅಚ್ಚಾಗಿದೆ ಸ್ಲೊವೇನಿಯಾ ಫೋಟೊಫ್ರೇಮ್

ಜಸ್ನಾ ಸರೋವರದ ಪ್ರವಾಸಿಗರಿಗೆ ಒಂದು ಅನಿರೀಕ್ಷಿತ ಉಡುಗೊರೆ ಕಾದಿರುತ್ತದೆ. ಅದು ಇಲ್ಲಿನ ಪ್ರಮುಖ ಆಕರ್ಷಣೆ – ಫೋಟೋ ಫ್ರೇಮ್! ಇಲ್ಲಿ ಬರುವ ಪ್ರವಾಸಿಗಳಿಗೆ ಫೋಟೊಗೋಸ್ಕರವಾಗಿ ಮರದಲ್ಲಿ ಮಾಡಿದ ಒಂದು ಸುಂದರವಾದ ಫೋಟೋ ಫ್ರೇಮ್ ಇದೆ. ಅದರ ಕೊನೆಯಲ್ಲಿ ಸ್ಲೋವೇನಿಯಾದ ಅಜ್ಜ ಪ್ರತಿಯೊಬ್ಬರ ಜೊತೆಗೂ ನೆನಪಾಗಿ ಅವರವರ ಮನೆಗಳಿಗೆ ತೆರಳುತ್ತಾನೆ. ನಾವೆಲ್ಲರೂ ಕೂತು ತೆಗೆಸಿಕೊಂಡಿರುವ ಫೋಟೋ ನೋಡಿದರೆ ನಿಮಗೊಂದು ಕ್ಷಣಕ್ಕೆ ಅಚ್ಚರಿಯಾಗುವುದು ಖಚಿತ. ಆ ಅಜ್ಜ ನಮ್ಮಲ್ಲಿಯ ಯಾರೋ ಒಬ್ಬರು ಎಂಬಂತೆ ಕಾಣುವಷ್ಟು ಚೆನ್ನಾಗಿ ಮೂಡಿ ಬಂದಿರುವ ಕೆತ್ತನೆಯ ಕಲಾವಿದನಿಗೆ ಹಾಗೂ ಈ ಕಲ್ಪನೆಯನ್ನು ಸಾಕಾರಗೊಳಿಸಿದ ಇಲ್ಲಿಯ ಪ್ರವಾಸೋದ್ಯಮ ಇಲಾಖೆಗೆ ನನ್ನ ಧನ್ಯವಾದಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ