Advertisement

Tag: kendasampige

ಸಾಟಿಯಿಲ್ಲದ ಸ್ಲೊವೇನಿಯಾ: ಪೋಸ್ಟೋಯ್ನಾ ಗುಹೆಗಳು

ಕಾರಿನಲ್ಲಿ ಸ್ಲೊವೇನಿಯಾದ ಯಾವುದೇ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ಎರಡು ತಾಸಿನಲ್ಲಿ ಪ್ರಯಾಣಿಸಬಹುದು. ಅಷ್ಟು ಪುಟ್ಟ ದೇಶ. ಪುಟ್ಟ ರಾಷ್ಟ್ರವಾದರೂ ವೈವಿಧ್ಯಮಯ ಪ್ರವಾಸಿ ಆಕರ್ಷಣೆಗಳನ್ನೊಳಗೊಂಡಿದೆ. ಪ್ರವಾಸಿಗಳಿಗೆ ಹೇರಳ ಅವಕಾಶಗಳನ್ನು ತೆರೆದಿಟ್ಟಿರುವ ಸ್ಲೊವೇನಿಯಾ ಪ್ರಕೃತಿ ಪ್ರೇಮಿಗಳನ್ನು ಎಲ್ಲ ಋತುಗಳಲ್ಲೂ ಕೈಬೀಸಿ ಕರೆಯುತ್ತದೆ. ಸ್ಲೊವೇನಿಯಾದ ಶುಭ್ರ ಸ್ಪಟಿಕದಂತಹ ಸ್ವಚ್ಚ ನದಿಗಳು ನನ್ನ ಅಚ್ಚುಮೆಚ್ಚು. ಪ್ರಪಂಚದ ಅತ್ಯಂತ ಸುಂದರ ಸರೋವರಗಳಲ್ಲಿ ಒಂದಾದ “ಲೇಕ್ ಬ್ಲೆಡ್” ಕೂಡ ಸ್ಲೊವೇನಿಯಾದಲ್ಲಿದೆ. ನಾನು ಗಮನಿಸಿದಂತೆ ಕನ್ನಡದ ಹಲವಾರು ಚಲನಚಿತ್ರಗಳ ಹಾಡುಗಳು ಸ್ಲೊವೇನಿಯಾದಲ್ಲಿ ಚಿತ್ರೀಕರಣಗೊಂಡಿವೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ಪ್ರತಿಭೆಯ ತಿಜೋರಿಯಿಂದ ಜಗತ್ತನ್ನು ಶ್ರೀಮಂತಗೊಳಿಸಿದವನು

ಬರಹಗಾರನಾಗಲು ಲಂಡನ್ ಗೆ ಬಂದಿಳಿದ ಷಾ ಸರಿಯಾದ ಉದ್ಯೋಗ ಇಲ್ಲದೆ ತಾಯಿಯಿಂದ ಮತ್ತು ಆಕೆಯ ಹೊಸ ಗಂಡನಿಂದ ವಾರಕ್ಕೆ ಸಿಗುವ ಒಂದು ಪೌಂಡ್ ಹಣದ ಮೇಲೆ ಅವಲಂಬಿತನಾಗಿದ್ದ. ಮಧ್ಯಾಹ್ನಗಳನ್ನು ಬ್ರಿಟಿಷ್ ಮ್ಯೂಸಿಯಮ್‌ನ ಓದುವ ಕೋಣೆಯಲ್ಲಿ ಕಳೆಯುತ್ತಿದ್ದ. ಶಾಲೆಯಲ್ಲಿ ಯಾವುದನ್ನು ಪಡೆಯಲಾಗಲಿಲ್ಲವೋ ಲೈಬ್ರರಿಯ ಓದಿನಲ್ಲಿ ಅವನ್ನು ಓದಿ ಗಳಿಸುವ ಪ್ರಯತ್ನ ಮಾಡುತ್ತಿದ್ದ. ಕಾದಂಬರಿ ಬರೆಯಲು ಶುರು ಮಾಡಿದ. ಇನ್ನು ಸಂಜೆಯ ಹೊತ್ತಿಗೆ ಉಪನ್ಯಾಸಗಳು ಚರ್ಚೆಗಳು ನಡೆಯುವ ಲಂಡನ್ ನ ತಾಣಗಳನ್ನು ಹುಡುಕಿಕೊಂಡು ಅಲೆಯುತ್ತಿದ್ದ.
‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ನಾಟಕಕಾರ ಬರ್ನಾರ್ಡ್‌ ಷಾ ಬಗ್ಗೆ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ. 
 ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ