Advertisement

Tag: kendasampige

ಬ್ರೋಕನ್ ವಿಂಗ್ಸ್: ಮಧ್ಯಮ ವರ್ಗದ ಪಡಿಪಾಟಲು

ವ್ಯಕ್ತಿಯೊಬ್ಬನಲ್ಲಿ ಒಡಮೂಡುವ ಭಾವನೆಗಳನ್ನು ಇನ್ನೊಂದು ಜೀವಿಗೆ ಸಂವಹಿಸುವ ಬಗೆಯಲ್ಲಿ ಆಯಾ ಪ್ರದೇಶದ ಸಾಂಸ್ಕೃತಿಕ ಅಂಶಗಳು ಪ್ರಧಾನ ಭೂಮಿಕೆಯಲ್ಲಿರುತ್ತವೆ ಎನ್ನುವುದೂ ಅಷ್ಟೇ ನಿಜವಾದ ಸಂಗತಿ. ವಿಸ್ತಾರವಾದ ಈ ಪ್ರಪಂಚದಲ್ಲಿ ಸಾಸ್ಕೃತಿಕ ಅಂಶಗಳು ಅನೇಕ ರೂಪಗಳಲ್ಲಿರುವುದು ಸಾಧ್ಯವಿದೆ. ಹೀಗಿರುವಾಗ ಹತ್ತಾರು ಸಾವಿರ ಮೈಲಿ ದೂರವಿರುವ ಪುಟ್ಟ ದೇಶದ ಚಲನಚಿತ್ರವೊಂದನ್ನು ನೋಡಿದಾಗ, ಇಗೋ ಇಲ್ಲೇ ನಮ್ಮ ಅಕ್ಕಪಕ್ಕದಲ್ಲಿರುವ ಮಧ್ಯಮ ವರ್ಗದ ಸಂಸಾರದಲ್ಲಿ ಹೀಗೆ ನಡೆಯಬಹುದು ಎನ್ನಿಸುವ ಹಾಗಿದ್ದರೆ ನಿಜಕ್ಕೂ ಸೋಜಿಗವಲ್ಲದೆ ಮತ್ತೇನು?
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ಇದು ಪ್ರೇಕ್ಷಕಾನುಸಂಧಾನ

ಒಂದು ಪ್ರಸಂಗದಲ್ಲಿ ಭೀಷ್ಮ, ಸತ್ಯವತಿಯನ್ನು ತುಂಬಾ ವರ್ಣನೆ ಮಾಡಿದ್ದನ್ನುಸರೋಜಕ್ಕ ನೋಡಿದರು. ತಂದೆ ಇಷ್ಟ ಪಟ್ಟ ಹೆಣ್ಣನ್ನು ತಾಯಿ ಅಂತನೇ ನೋಡಬೇಕಿತ್ತು. ಹಾಗೆಲ್ಲಾ ತುಂಬಾ ವರ್ಣನೆ ಮಾಡಿದ್ದು ಆಭಾಸವಾಯಿತು ಅಂದರು. ಕರ್ಣಪರ್ವದಲ್ಲಿ ಕರ್ಣ ಪಾಪ, ಪಾಂಡವರಾಗಿ ಹುಟ್ಟಿದರೂ ಏನು ಇಲ್ಲ. ತಾಯಿ ಇದಾರೆ, ತಮ್ಮಂದಿರಿದಾರೆ. ಆದರೂ ಯಾರೂ ಇಲ್ಲ. ಇಡೀ ಮಹಾಭಾರತದಲ್ಲಿ ಕರ್ಣ ಅಂದ್ರೆ ಬಹಳ ಪ್ರೀತಿ. ಕುಂತಿ ನೋಡಿದ್ರೆ ಸಿಟ್ಟು ಬರತ್ತೆ ಒಂದೊಂದ್ಸಲ. ಆದರೆ ಕೀಲಿ ಕೈ ಇರೋದು ಕೃಷ್ಣನ ಹತ್ರನೇ. ಕಪಟ ನಾಟಕ ಅಂತನೇ ಇದೆಯಲ್ಲ.
ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯ‌ ಬರಹ

Read More

ಯುದ್ಧ ನಂತರದ‌ ಕತ್ತಲಲ್ಲಿ ಅರಿವಿನ ಬೆಳಕು

ಜೈನಾ ದುಬಾಯಿಂದ ಬೈರುತ್ ಗೆ ಬಂದು ಅಲ್ಲಿಂದ ಆಕ್ರಮಣಕ್ಕೆ ಒಳಗಾದ ಬಿಂಟ್ ಬಿಲ್‌ ಊರನ್ನು ತಲುಪಿರುತ್ತಾಳೆ. ಟೋನಿಯೊಂದಿಗೆ ಪ್ರಯಾಣ ಸಾಗುತ್ತಿದ್ದಂತೆ ಇಬ್ಬರಿಗೂ ತಮ್ಮಷ್ಟಕ್ಕೆ ಇರುವುದು ಅಸಹಜವೆನ್ನಿಸಿ, ನಿಧಾನವಾಗಿ ಕೇವಲ ವ್ಯಕ್ತಿಗಳಂತೆ ಇದ್ದವರು ಪರಸ್ಪರ ಅರಿತುಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಅವರ ಭಾವಗಳಲ್ಲಿ, ಮುಖಚಹರೆಗಳಲ್ಲಿ ವ್ಯಕ್ತವಾಗುವುದನ್ನು ಸಮೀಪ ಚಿತ್ರಿಕೆಗಳಲ್ಲಿ ನಿರೂಪಿತಗೊಂಡಿವೆ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಲೆಬನಾನ್‌ನ ʻಅಂಡರ್‌ ದ ಬಾಂಬ್ಸ್ʼ ಸಿನಿಮಾದ ವಿಶ್ಲೇಷಣೆ

Read More

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ