Advertisement

Tag: kendasampige

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ತಾಷ್ಕೆಂಟ್‌ಗೆ ವಿದಾಯ

ಯುದ್ಧದ ಹಿಂಸೆ ಮತ್ತು ಅಸಹಾಯಕತೆಯನ್ನು ಸಹಿಸುತ್ತ, ಸಾವು ನೋವು ಅನುಭವಿಸುತ್ತ ಮುನ್ನಡೆಯುವ ಛಲ ಲೋಕದ ಜನಸಮುದಾಯಗಳಿಗೆ ಅದು ಹೇಗೆ ಬರುವುದೊ! ಬಹುಶಃ ಅನುಭವಿಸಿದಾಗಲೇ ಗೊತ್ತಾಗುವುದು. ಇದೇ ಉಜ್ಬೆಕಿಸ್ತಾನ ಮೂಲದ ಮೊಘಲ ಸಂತತಿಯ ಔರಂಗಜೇಬ್, ನನ್ನ ಜನ್ಮಸ್ಥಳ ವಿಜಯಪುರದ ಮೇಲೆ ದಂಡೆತ್ತಿ ಬಂದು ಆದಿಲಶಾಹಿ ಸಾಮ್ರಾಜ್ಯವನ್ನು ಹಾಳುಗೆಡವಿದ. ಅನೇಕ ಸೂಫಿಸಂತರ ಕೊಲೆ ಮಾಡಿದ. ಯುದ್ಧದಲ್ಲಿ ಯಾರು ಮುಸ್ಲಿಮರು? ಯಾರು ಹಿಂದುಗಳು? ಯಾರು ಕ್ರೈಸ್ತರು? ಯುದ್ಧದಲ್ಲಿ ಧರ್ಮವಿಲ್ಲ, ನೀತಿಯಿಲ್ಲ, ನ್ಯಾಯವಿಲ್ಲ. ಅದು ಕೇವಲ ಯುದ್ಧ. ಗೆದ್ದವರನ್ನೂ ಆರ್ಥಿಕವಾಗಿ ಮತ್ತು ನೈತಿಕವಾಗಿ ಸೋಲಿಸುವ ಯುದ್ಧ.
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ 47ನೇ ಕಂತು ಇಲ್ಲಿದೆ.

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ