Advertisement

Tag: kendasampige

ನನ್ನ ಹಾಡು ನನ್ನದು ಎಂದ ಸಾಹಿರ್

ಪರಸ್ಪರ ಆಕರ್ಷಣೆ ಅವಕಾಶಗಳಿದ್ದ ಯಾವ ಪ್ರಣಯಾಸಕ್ತಿಗಳನ್ನೂ ಸಹ ಸಾಹಿರ್ ಒಂದು  ಹಂತದ ನಂತರ ಮುಂದುವರೆಸುವ ಇಚ್ಛೆ ತೋರಿಸುತ್ತಿರಲಿಲ್ಲ. ಸಾಹಿರನ ಕಥೆ ವ್ಯಥೆಗಳನ್ನು ಆಪ್ತವಾಗಿ ಬಲ್ಲ ಒಡನಾಡಿಗಳು ಹಾಗು ವಿಮರ್ಶಕರು ಈ ವಿಷಯವಾಗಿ ಅನೇಕ ರೀತಿಯ ಟೀಕೆ ಟಿಪ್ಪಣಿಗಳನ್ನು ಕೊಡುತ್ತಾರೆ. ಹೆತ್ತರವರ ನಡುವಿನ ವಿರಸ ಘರ್ಷಣೆಗಳ ಮಧ್ಯೆ ಸಿಲುಕಿ ನಲುಗಿ ಹೀಗೆ ಜವಾಬ್ದಾರಿಗಳಿಂದ ದೂರ ಸರಿಯುತ್ತಾನೆ ಎಂದು ಅನೇಕರು ಹೇಳುತ್ತಾರೆ. ಮಾರ್ಚ್ 8 ಅಂದರೆ ಆತನ 101ನೆಯ…

Read More

ಗೀತಾಂಜಲಿಯ ವಿಶ್ವಕವಿ, ಬಹುಸಂಸ್ಕೃತಿಯ ವಕ್ತಾರ

ಹದಿನೇಳು ವರ್ಷದ ರವೀಂದ್ರನಾಥ, ಮತ್ತೆ ಮತ್ತೆ ಓದಿಸಿ ಬಾಯಿಪಾಠ ಮಾಡಿಸುವ ಇಂಗ್ಲೆಂಡ್ ನ ಶಿಕ್ಷಣದಿಂದ ಭ್ರಮನಿರಸನ ಹೊಂದಿ ಪದವಿ ಸರ್ಟಿಫಿಕೇಟ್ ದೊರೆಯುವ ಮೊದಲೇ ಓದು ನಿಲ್ಲಿಸಿ ಭಾರತಕ್ಕೆ ಮರಳಿದ್ದರು. ೧೯೦೧ರಲ್ಲಿ ಕೊಲ್ಕತ್ತಾದ ಗೌಜು ಗದ್ದಲಗಳಿಂದ ದೂರ, ನದಿ ತೊರೆಗಳ ಜುಳುಜುಳು ಕೇಳಿಸುವ, ನಿಬಿಡ ಮರಗಿಡಗಳ ಹಸಿರು ತುಂಬಿರುವ ನೈಸರ್ಗಿಕ ಮಡಿಲಿನ ಹಳ್ಳಿಯಲ್ಲಿ ಶಾಂತಿನಿಕೇತನ ವಿದ್ಯಾಲಯ ಆರಂಭಿಸಿದರು.
ಯೋಗೀಂದ್ರ ಮರವಂತೆ ಬರೆಯುವ…

Read More

ಒಬರಮೆರ್ಗಾವ್ ನಗರದಲ್ಲಿ ‘ಸಾತ್ವಿಕತೆ’ಯ ವ್ಯಾಖ್ಯಾನ

ಮೇರಿ ಮಾತೆಯ ಪಾತ್ರದಲ್ಲಿ ನಟಿಸಲು ಆಯ್ಕೆಯಾಗ ಬೇಕಾದರೆ ಆಕೆ ಕನ್ಯೆಯಾಗಿರಬೇಕು. ಗಂಡುಗಳ ಸ್ನೇಹ ಬೆಳೆಸದೆ, ಹೆಚ್ಚಿನ ಗೆಳತಿಯರೊಡನೆ ಸೇರದೆ, ನಾಟಕ ಸಿನೆಮಾಗಳನ್ನು ನೋಡದೆ, ಉಪ್ಪು ರಹಿತ ಊಟ ಮಾಡುತ್ತಾ, ಸದಾ ಕಾಲವೂ ಆಧ್ಯಾತ್ಮಿಕವಾಗಿ ಜೀವನ ನಡೆಸುತ್ತಾ, ಬೈಬಲ್ ಓದುತ್ತಾ, ರಸ್ತೆಗಳಲ್ಲಿ ನಡೆಯುವಾಗ ತಲೆಯೆತ್ತದೆ ಸಾತ್ವಿಕವಾಗಿ 10 ವರ್ಷಗಳನ್ನು ಕಳೆದರೆ ಆಕೆ ಆಯ್ಕೆ ಪ್ರಕ್ರಿಯೆಯ ಸರದಿಗೆ ಬರಲು ಅರ್ಹಳಾಗುತ್ತಾಳೆ.

Read More

ಕಳ್ಳತನಕ್ಕೆ ಗುಡ್ ಬೈ ಹೇಳಿದ ಗಂಟಿಚೋರರು ಮಾಡಿದ್ದೇನು?

ಆಗ ತುಡುಗು ಮಾಡುವುದು ಅವರ ಆರ್ಥಿಕತೆಯ ಪ್ರಧಾನ ಮೂಲವಾಗಿತ್ತು. ಅಂತೆಯೇ ಹಣ ಬಂಗಾರ ಮಾತ್ರವಲ್ಲದೆ ದಿನಬಳಕೆಯ ವಸ್ತುಗಳನ್ನು ಹೆಚ್ಚು ತುಡುಗು ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಈ ಸಮುದಾಯವು ಮುಖ್ಯವಾಗಿ ತುಡುಗು ಮಾಡುವ ಉದ್ದೇಶದಲ್ಲಿ ಹೊಟ್ಟೆಪಾಡಿನ ಅನಿವಾರ್ಯತೆ ಇತ್ತು. ಹಾಗಾಗಿ ಹಿಂದೆಯೂ ಕೂಡ ಈ ಸಮುದಾಯದಲ್ಲಿ ತುಡುಗುತನ ಇದ್ದದ್ದು ಹೆಚ್ಚಾಗಿ ಹಸಿವನ್ನು ನೀಗಿಸುವ ವಸ್ತುಸಂಗತಿಗಳಿಗೆ ಸಂಬಂಧಿಸಿದ್ದು ಎನ್ನುವುದನ್ನು ಗಮನಿಸಬೇಕು.
ಡಾ.ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹತ್ತನೆಯ ಕಂತು.

Read More

ಒಂದು ನೊಣದ ಕಥೆ….

ಅಂದು ಬೆಳಿಗ್ಗೆ ಕೋರ್ಟಿಗೆ ಹೋದ ನನಗೆ ಕಟ ಕಟೆಯಲ್ಲಿ ಮುಖಾಮುಖಿಯಾಗಿದ್ದು ಆಗ ಬೆಂಗಳೂರಿನಲ್ಲಿ ಇದ್ದಂತಹ ಇಬ್ಬರು ಪ್ರಸಿದ್ಧ, ಘಟಾನುಘಟಿ ಕ್ರಿಮಿನಲ್ ವಕೀಲರುಗಳಲ್ಲಿ ಒಬ್ಬರು. ಶವಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ನಾನು ನೀಡುತ್ತ ಹೋದಂತೆ ಅವರು ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಕೆಲವು ದಿವಸಗಳ ಹಿಂದೆಯಷ್ಟೇ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡು ಬಂದಿದ್ದ ನಾನು ಪರೀಕ್ಷೆಗೆಂದು ಬಹಳಷ್ಟು ಓದಿದ್ದೆ. ಆದ್ದರಿಂದ ಪಾಟೀ ಸವಾಲು ಎದುರಿಸುತ್ತ, ಸಾವು ಸಂಭವಿಸಿ ಅಂದಾಜು ಎಷ್ಟು ದಿನಗಳಾಗಿರಬಹುದು ಎಂಬುದನ್ನು ಹೇಳಿದೆ. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ ಹೊಸ ಬರಹ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ