Advertisement

Tag: kendasampige

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಕಣ್ರೆಪ್ಪೆ ಬಡಿದೇ ಹೇಳಿದ ಕತೆಯಿದು, ಅಲ್ಲಲ್ಲ.. ಜೀವನಚರಿತ್ರೆಯ ದೃಶ್ಯಗಳಿವು

ತಮ್ಮ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬ ಪುಸ್ತಕವನ್ನು ಬರೆಯಬೇಕೆಂದ ಅಪೇಕ್ಷೆಯನ್ನು ಕೇಳಿ ಉಳಿದವರಿಗೆ ಆಶ್ಚರ್ಯವಾಗುತ್ತದೆ. ಡೊಮಿನಿಕ್ ಗೆ ಇದು ಅಸಾಧ್ಯವೆನಿಸುವುದಿಲ್ಲ. ಸ್ಪೀಚ್ ಥೆರಪಿಸ್ಟ್ ಹೇಳಿಕೊಟ್ಟ ಪ್ರಕಾರ ಸೂಚನೆಗಳನ್ನು ಅನುಸರಿಸಿ ಅಕ್ಷರಗಳನ್ನು ಹೆಣೆದು ಪದಗಳನ್ನು ಹೊಂದಿಸಿ ಬರೆಯುವವರು ಬೇಕೆಂದು ಬಯಸುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಜೀನ್ ಡೊಮಿನಿಕ್ ಬಾಬಿ ಜೀವನಚರಿತ್ರೆಯನ್ನಾಧರಿಸಿದ ಫ್ರಾನ್ಸ್‌ನ ʻದ ಡೈವಿಂಗ್‌ ಬೆಲ್‌ ಅಂಡ್‌ ದ ಬಟರ್‌ಫ್ಲೈ ʼ ಸಿನಿಮಾ ಕುರಿತ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ