Advertisement

Tag: kendasampige

ಹೆಸರು ಧರಿಸಲೊಲ್ಲದ ಅನಾಮಧೇಯರು

ಈ ಮಿಡಲ್ ಸಿಸ್ಟರ್, ಹದಿನೆಂಟು ವರ್ಷದ ಯುವತಿ. ಅವಳಿಗೆ ಪಕ್ಕದೂರಿನಲ್ಲಿ ತನ್ನ ಮತಕ್ಕೆ ಸೇರದ ಒಬ್ಬ ‘ಮೇ ಬಿ’ ಬಾಯ್‍ಫ್ರೆಂಡ್ ಕೂಡ ಇದ್ದಾನೆ. “ನಾನು ಯಾವತ್ತೂ ಹತ್ತೊಂಬತ್ತನೆಯ ಶತಮಾನದ ಕಾದಂಬರಿಗಳನ್ನೇ ಓದುತ್ತೇನೆ, ಇಪ್ಪತ್ತನೆಯ ಶತಮಾನದ ರಾಜಕೀಯದಿಂದ ತಪ್ಪಿಸಿಕೊಳ್ಳಲು ನಾನೇ ಕಂಡುಕೊಂಡ ಶಾಂತಿಮಾರ್ಗವಿದು” ಎನ್ನುವ ಮಿಡಲ್ ಸಿಸ್ಟರ್ ಮನೆಯಿಂದ ಕೆಲಸಕ್ಕೆ, ಕೆಲಸದಿಂದ ಮನೆಗೆ ಸಾಗುವ ರಸ್ತೆಯಲ್ಲಿ ಪುಸ್ತಕ ಓದುತ್ತ ನಡೆಯುತ್ತಾಳೆ. ಓದುವ ಸಂಸ್ಕೃತಿ ಇರದ, ಅಷ್ಟೇನೂ ವಿದ್ಯಾವಂತರಿಲ್ಲದ ಈ ಪ್ರಾಂತ್ಯದಲ್ಲಿ ಅವಳ ಈ ವಿಚಿತ್ರ ಹವ್ಯಾಸಕ್ಕೆ ಮೂಗು ಮುರಿಯುವವರೇ ಎಲ್ಲ.
ಕಾವ್ಯಾ ಓದಿದ ಹೊತ್ತಿಗೆ ಅಂಕಣ.

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಟ್‌ ಕತೆ

ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳು

ಈ ಸಿನೆಮಾದ ಎಲ್ಲ ಕತೆಗಳೂ ನಗರದ ಕತೆಗಳು. ಇತ್ತೀಚೆಗೆ ಬರುತ್ತಿರುವ ಭಾರತದ ವಿವಿಧ ಭಾಷೆಗಳ ಹೊಸ ಅಲೆಯ ಸಿನೆಮಾಗಳು ಹಳ್ಳಿಗಳಲ್ಲಿ ನಡೆಯದೇ ನಗರಗಳಲ್ಲಿ ನಡೆಯುತ್ತಿರುವುದನ್ನು ಗಮನಿಸಿ. ಇದು ನಿರ್ದೇಶಕರು ನಗರಗಳಲ್ಲಿ ಹುಟ್ಟಿ ಬೆಳೆದುದರ ಪರಿಣಾಮವೂ ಹೌದು ಮತ್ತು ಭಾರತ ನಗರೀಕರಣವಾಗುತ್ತಿರುವ ಪರಿಣಾಮವೂ ಎಂದು ಅನಿಸುತ್ತದೆ. ಕತೆಗಳು ಮೇಲ್ಮಧ್ಯಮ ಅಥವಾ ಶ್ರೀಮಂತ ವರ್ಗಗಳ ಮನೆಗಳಲ್ಲಿ ನಡೆಯುತ್ತವೆ, ಓಟಿಟಿಯಲ್ಲಿ ನೋಡಿದ ತಮಿಳಿನ ಮೂರು ಆ್ಯಂಥಾಲಾಜಿ ಸಿನೆಮಾಗಳ ಬಗ್ಗೆ ‘ಇಂಗ್ಲೆಂಡ್‌ ಪತ್ರ’ ಬರೆದಿದ್ದಾರೆ ಕೇಶವ ಕುಲಕರ್ಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ