Advertisement

Tag: kendasampige

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಸಾಟಿಯಿಲ್ಲದ ಸ್ಲೊವೇನಿಯಾ: ಪೋಸ್ಟೋಯ್ನಾ ಗುಹೆಗಳು

ಕಾರಿನಲ್ಲಿ ಸ್ಲೊವೇನಿಯಾದ ಯಾವುದೇ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ಎರಡು ತಾಸಿನಲ್ಲಿ ಪ್ರಯಾಣಿಸಬಹುದು. ಅಷ್ಟು ಪುಟ್ಟ ದೇಶ. ಪುಟ್ಟ ರಾಷ್ಟ್ರವಾದರೂ ವೈವಿಧ್ಯಮಯ ಪ್ರವಾಸಿ ಆಕರ್ಷಣೆಗಳನ್ನೊಳಗೊಂಡಿದೆ. ಪ್ರವಾಸಿಗಳಿಗೆ ಹೇರಳ ಅವಕಾಶಗಳನ್ನು ತೆರೆದಿಟ್ಟಿರುವ ಸ್ಲೊವೇನಿಯಾ ಪ್ರಕೃತಿ ಪ್ರೇಮಿಗಳನ್ನು ಎಲ್ಲ ಋತುಗಳಲ್ಲೂ ಕೈಬೀಸಿ ಕರೆಯುತ್ತದೆ. ಸ್ಲೊವೇನಿಯಾದ ಶುಭ್ರ ಸ್ಪಟಿಕದಂತಹ ಸ್ವಚ್ಚ ನದಿಗಳು ನನ್ನ ಅಚ್ಚುಮೆಚ್ಚು. ಪ್ರಪಂಚದ ಅತ್ಯಂತ ಸುಂದರ ಸರೋವರಗಳಲ್ಲಿ ಒಂದಾದ “ಲೇಕ್ ಬ್ಲೆಡ್” ಕೂಡ ಸ್ಲೊವೇನಿಯಾದಲ್ಲಿದೆ. ನಾನು ಗಮನಿಸಿದಂತೆ ಕನ್ನಡದ ಹಲವಾರು ಚಲನಚಿತ್ರಗಳ ಹಾಡುಗಳು ಸ್ಲೊವೇನಿಯಾದಲ್ಲಿ ಚಿತ್ರೀಕರಣಗೊಂಡಿವೆ.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

Read More

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ