Advertisement

Tag: kendasampige

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಜಪಾನ್‌ ನ ʻಡ್ರೈವ್‌ ಮೈ ಕಾರ್ʼ: ವಿಷಾದ ಪ್ರಧಾನ ಚಿತ್ರ

ಹಿರೋಶಿಮಾಗೆ ಆ ನಾಟಕವನ್ನು ನಿರ್ದೇಶಿಸಲು ಹೊರಟವನಿಗೆ ಪ್ರಾರಂಭದಲ್ಲಿಯೇ ಅನಿರೀಕ್ಷಿತ ಪ್ರಸಂಗ ಎದುರಾಗುತ್ತದೆ. ನಾಟಕ ಸಂಸ್ಥೆಯವರು ಕಫುಕುನ ಕಾರಿಗೆ ಡ್ರೈವರೊಬ್ಬಳನ್ನು ಏರ್ಪಾಡು ಮಾಡಿರುತ್ತಾರೆ. ಆದರೆ ಕಫುಕುಗೆ ಇಷ್ಟವಾಗುವುದಿಲ್ಲ. ಏಕಾಂಗಿಯಾಗಿ ಕಾರಲ್ಲಿ ಓಡಾಡುವುದು ಇಷ್ಟವೆನಿಸಿ ಬೇಡವೆಂದರೂ ಕೇಳದೆ ಮಿಸಕಿ ವಕಾರಿ ಎಂಬ ಯುವತಿಯನ್ನು ಗೊತ್ತು ಮಾಡುತ್ತಾರೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಜಪಾನೀ ಚಿತ್ರದ ಕುರಿತ ಹೊಸ ಬರಹ

Read More

ಮಾರ್ಟಿನ್ ಲೂಥರ್ ಕಿಂಗ್ ನೆನಪಿನಲ್ಲಿ ಹಾಕಿದ ಹೆಜ್ಜೆಗಳು

ನಾನು ವಿದೇಶದಲ್ಲಿರುವ ಪರದೇಶಿ ಎನ್ನಿಸಲಿಲ್ಲ. ಅಮೆರಿಕ  ದೇಶವನ್ನು ನೋಡುವ ದೃಷ್ಟಿಕೋನವೇ ಬದಲಾಯ್ತು. ಆ ದಿನ ನನ್ನುಸಿರಿಗೆ ಉಸಿರು ಕೊಟ್ಟ ಮಾರ್ಟಿನ್. ನನಗೀಗ ಜೀವನ ಬೇಕು ಅನಿಸಲು ಶುರುವಾಯ್ತು. ಒಳಗಿನ ಕಣ್ಣು ಇಂಚಿಂಚೇ ತೆರೆಯ ಹತ್ತಿತು. ಮುಂದಿನ ಎಲ್ಲಾ ದಿನಗಳ ಪ್ರಯಾಣದಲ್ಲಿ ಅಲ್ಲಿನ ಎಲ್ಲೆಡೆಯಲ್ಲೂ ಕೆಳಮಟ್ಟದ ಕೆಲಸ ಎಂದು ಗುರುತಿಸಲ್ಪಟ್ಟಿರುವ ಎಲ್ಲಾ ಕೆಲಸಗಳನ್ನು ಕಪ್ಪು ಜನರೇ ಮಾಡುತ್ತಿದ್ದದ್ದು ಎದ್ದು ಕಾಣುತ್ತಿತ್ತು. ಬಿಳಿಯರ ಜೊತೆಗೆ ತಮ್ಮನ್ನು ಗುರುತಿಸಿಕೊಳ್ಳಬೇಕೆನ್ನುವ ಹಪಾಹಪಿ ಅವರಲ್ಲಿ ಇನ್ನೂ ಜೀವಂತವಿರುವುದನ್ನು ಕಂಡೆ.
‘ಕಂಡಷ್ಟು ಪ್ರಪಂಚ’ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ