Advertisement

Tag: kendasampige

ಮರೆಯಲಾಗದ ಆ ನಾಲ್ಕು ರಾತ್ರಿಗಳು

ಹಗಲಿನಲ್ಲಿ ಎಲ್ಲೆಲ್ಲೋ ಹಂಚಿಹೋಗಿದ್ದ ಇವರನ್ನೆಲ್ಲ ಹೀಗೆ ಒಂದೇ ಸೂರಿನಡಿ ಸೇರಿಸಿದ್ದ ಇರುಳು ಎಷ್ಟೊಂದು ಬಲಶಾಲಿ ಅಂದುಕೊಳ್ಳುತ್ತಲೇ ಸಣ್ಣಗೆ ತೂಕಡಿಕೆ. ಅಲ್ಯಾರೋ ಕೆಮ್ಮಿದ ಸದ್ದು. ಮತ್ಯಾರೋ ಮಗುವನ್ನು ತಟ್ಟಿದ ಸಪ್ಪಳ. ಇನ್ಯಾರೋ ಯಾರಿಗೋ ಗದರಿದ ದನಿ. ಮಧ್ಯೆ-ಮಧ್ಯೆ ಹೆಗ್ಗಣಗಳ ಓಡಾಟ. ಅಪರೂಪಕ್ಕೆ ರೈಲಿನ ಕೂಗು. ಮೈಕಿನ ಅನೌನ್ಸ್‌ಮೆಂಟು… ಎಲ್ಲವೂ ಬೇರಾವುದೋ ಲೋಕದ್ದು ಎನ್ನುವಂಥ ಮಂಪರು. ಮುಂಜಾನೆ ಎಚ್ಚರಾದಾಗ ಪಕ್ಕದಲ್ಲೇ ಹಮಾಲಿ ಮಂದಿಯ ಗುಂಪೊಂದು ಸೇರಿತ್ತು.

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಮಕ್ಕಳನ್ನು ಓದಿಸಿದ ಮಾವಿನಮರಗಳು

ಅಡ್ವಾನ್ಸ್ ಕೊಟ್ಟೋದ ಸಾಬರು ಕೆಲವೊಮ್ಮೆ ರೇಟ್ ಬಿದ್ದೋಗಿದೆ ಎಂದು ಮರದಿಂದ ಹಣ್ಣು ಉದುರಿ ಹೋಗುತ್ತಿದ್ದರೂ ಬರುತ್ತಿರಲಿಲ್ಲ. ಅಪ್ಪ ಇನ್ನೂರೊ ಮುನ್ನೂರೊ ಅಡ್ವಾನ್ಸ್‌ಗೆ ಕಟಿಬಿದ್ದು ಉದುರುವ ಹಣ್ಣುಗಳನ್ನು ನೋಡಿಕೊಂಡು ಇನ್ನೊಬ್ಬರಿಗೂ ಕೊಡದೆ ಲಾಸ್ ಮಾಡಿಕೊಂಡದ್ದೂ ಇದೆ. ಸಾಬರು ಮರಗಳಿಗೆ ಕೊಟ್ಟೋದ ಅಡ್ವಾನ್ಸ್‌ ಹಣದಲ್ಲಿ ಅಪ್ಪ ಪ್ರತಿ ವರ್ಷ ನಮಗೆ ಬರೆಯುವ ನೋಟ್ ಬುಕ್ಕು ಕೊಡಿಸುತ್ತಿತ್ತು, ಪೂರ್ತಿ ಹಣ ಕೊಟ್ಟ ಮೇಲೆ ಅಕ್ಕಂದಿರಿಗೆ ಮತ್ತು ನಮಗೆ ಯೂನಿಫಾರ್ಮ್‌ ಕೊಡಿಸುತ್ತಿತ್ತು.

Read More

‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

ಅನುಭವಕ್ಕೆ ಸ್ವತಃ ಯಾವುದೇ ರೀತಿಯ ಆಕೃತಿ ಇಲ್ಲ. ಆದರೆ ನಾವು ಮಾತ್ರ ಇದು ಸುಖದ ಅನುಭವ, ಇದು ದುಃಖದ ಅನುಭವ, ಇದು ವಿಹ್ವಲತೆ, ತಲ್ಲಣ, ಇದು ವಿಷಾದದ ಅನುಭವ ಎಂದೆಲ್ಲ ಹೆಸರಿಡುತ್ತೇವೆ ಎಂದು  ಹೇಳುವ ಆನಂದ ಝುಂಜರವಾಡ ಮೂಲತಃ ಕಾವ್ಯಶಕ್ತಿಯನ್ನು ಒಲಿಸಿಕೊಂಡ ಕವಿ. ಇತ್ತೀಚೆಗೆ ಅವರ ಹೊಸ ಕವನ ಸಂಕಲನ ಶಬ್ದ ಸುಪಾರಿ ಬಿಡುಗಡೆಯಾಯಿತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ