Advertisement

Tag: kendasampige

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ನನ್ನನ್ನು ಹುಡುಕಿಕೊಳ್ಳುವ ದಾರಿಯಲ್ಲಿ ಸಿಕ್ಕ ಹೊಳಹುಗಳು

ಕನಕ ದಾಸರು “ನಾನು ಹೋದರೆ ಹೋದೇನು” ಎಂದಾಗ, ಅವರೆಂದದ್ದು ಸತ್ತ ನಂತರ ಸ್ವರ್ಗ ಸೇರುವ ಮಾತಲ್ಲ – ಮಕ್ಕಳಿಗಾಗಿ ಆ ಕತೆಯನ್ನು ನಾವು ಹೇಳಿದರೂ. ಅವರೆಂದದ್ದು ಪೂರ್ಣ ಧ್ಯಾನದಲ್ಲಿ ತೊಡಗಿಕೊಂಡಾಗ ಈ “ನಾನು” ಎಂಬ ಭಾವ “ಹೋಗುವ” ವಿಷಯ. ಆಸಕ್ತಿಕರ ವಿಷಯವೆಂದರೆ, ಆಧುನಿಕ ನ್ಯೂರೋಸೈನ್ಸ್ ಸಹ ಅದನ್ನೇ ಹೇಳುತ್ತಿದೆ. ಧ್ಯಾನದಲ್ಲಿ ತೊಡಗಿಕೊಂಡವರ ಮಿದುಳನ್ನು ಪರಿಶೀಲಿಸಿದಾಗ, ಮಿದುಳಿನ “ನಾನು ಕೇಂದ್ರ”ಗಳು ಸ್ಥಬ್ಢವಾಗುವುದನ್ನು ಗಮನಿಸಿದ್ದಾರೆ.  ಶೇಷಾದ್ರಿ ಗಂಜೂರು ಬರೆದ ಲೇಖನ..

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ