Advertisement

Tag: kendasampige

ಅಣ್ಣ ನೆಟ್ಟ ದೇವರ ಮರ

ಅಪ್ಪನ ಕೆಮ್ಮುಗಳಲ್ಲಿ ಎರಡು ವಿಧಗಳಿದ್ದವು. ಒಂದು ಬೀಡಿ ದಮ್ಮಿನ ಕೆಮ್ಮು, ಇನ್ನೊಂದು ಎಚ್ಚರಿಕೆಯ ಕರಗಂಟೆಯ ಒಣಕೆಮ್ಮು. ಎರಡನೆಯ ಕೆಮ್ಮು ಒಂಥರ ನಮ್ಮಪ್ಪನ ಸಿಗ್ನಲ್ಲು ಕೂಡ ಆಗಿತ್ತು. ನಮಗೆಲ್ಲಾ ಆ ಕೆಮ್ಮಿನ ಧ್ವನಿಯ ಹಿಂದಿರುವ ಭಾಷೆ, ಭಾವಗಳು ತಕ್ಷಣಕ್ಕೆ ಗೊತ್ತಾಗಿ ಬಿಡುತ್ತಿದ್ದವು. ಅಪ್ಪ ಸಿಟ್ಟಿನಲ್ಲಿ ಇದ್ದಾರಾ? ಇಲ್ಲ ಒಳ್ಳೇ ಮೂಡ್ನಲ್ಲಿ ಬರ್ತಿದ್ದಾರಾ? ಎನ್ನುವುದು ತಿಳಿಯುತ್ತಿತ್ತು. ಜೊತೆಗೆ `ನಾನು ಬರುತ್ತಿದ್ದೇನೆ ಹೋಶಿಯಾರ್’ ಎಂಬ ಬೋಪರಾಕ್ ಕೂಡ ಆ ಕೆಮ್ಮಿನ ದನಿಯಲ್ಲಿ ಅಡಕವಾಗಿರುತ್ತಿತ್ತು. -ಕಲೀಮ್‌ಉಲ್ಲಾ ಬರೆದ “ಬಾಡೂಟದ ಮಹಿಮೆ” ಪ್ರಬಂಧ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ವಿಜಾಪುರ ನಗರಿಯ ರಂಗು, ವಿಸ್ಮಯಗಳು

ವಿಜಾಪುರಕ್ಕೆ ಬಂದಮೇಲೆ ಬಹಳ ದಿನಗಳ ನಂತರ ನಾವು ಟಾಂಗಾದಲ್ಲಿ ಜೋಡಗುಂಬಜ ದರ್ಗಾಕ್ಕೆ ಹೋಗಿ ವಾಪಸ್ ಮನೆಯ ಸಮೀಪ ಬರುತ್ತಿರುವಾಗ ಅಲ್ಲೀಬಾದಿಯಲ್ಲಿ ನಾವು ಸಾಕಿದ ನಾಯಿ ಕಂಡಿತು. ಕಂಡೊಡನೆ ಅದು ಟಾಂಗಾದ ಬೆನ್ನು ಹತ್ತಿತು. ಅದರ ಅವಸ್ಥೆ ನೋಡಿ ನನ್ನ ಕರುಳು ಕಿತ್ತುಬಂದಂತಾಯಿತು. ನಾನು ಮುಟ್ಟುವ ಸ್ಥಿತಿಯಲ್ಲಿ ಅದು ಇರಲಿಲ್ಲ. ಆ ತೆಳ್ಳನೆಯ ಬಿಳಿ ನಾಯಿಯ ಮೈತುಂಬ ಚಿಕ್ಕ ಚಿಕ್ಕ ಹುಣ್ಣುಗಳಾಗಿ ರಕ್ತದ ಬಿಂದುಗಳಂತೆ ಕಾಣುತ್ತಿದ್ದವು. ಅದು ಬಹಳ ಆಯಾಸಗೊಂಡಿತ್ತು. ಆದರೆ ಟಾಂಗಾದ ಬೆನ್ನು ಬಿಡಲಿಲ್ಲ. ಮನೆ ಬಂದಿತು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಒಂಭತ್ತನೆಯ ಕಂತು.

Read More

ನಾನು ರಂಜಾನ್ ದರ್ಗಾ, ಎಪ್ಪತ್ತು ವರ್ಷಗಳ ಮುಗಿಸಿ ಎಪ್ಪತ್ತೊಂದನೇ ವರ್ಷಕ್ಕೆ ಕಾಲಿಟ್ಟಿರುವೆ…

”ಆ ಆಕಳುಗಳ ಹಿಂಡಿನಲ್ಲಿ ಗಂಗಾ ಎಂಬ ಆಕಳು ಇತ್ತು. ಅದು ನನ್ನನ್ನು ತಾಯಿಯಂತೆ ಪ್ರೀತಿಸುತ್ತಿತ್ತು. ನಾನು ಗೆಳೆಯರ ಜೊತೆ ಓಡಾಡುತ್ತ ಹಸಿವಾದಾಗ ಗಂಗಾ ಬಳಿ ಹೋಗುತ್ತಿದ್ದೆ. ನನ್ನನ್ನು ನೋಡಿದ ತಕ್ಷಣ ಅದು ಕಕ್ಕುಲತೆಯಿಂದ ಧ್ವನಿ ತೆಗೆಯುತ್ತಿತ್ತು. ನಾನು ಹೋಗಿ ಅದರ ಬಾಯಿ ಮುಂದೆ ಕೂಡುತ್ತಿದ್ದೆ. ಅದು ಬಹಳ ಪ್ರೀತಿಯಿಂದ ನನ್ನ ತಲೆ ನೆಕ್ಕುತ್ತಿತ್ತು.”
ಹಿರಿಯ ಪತ್ರಕರ್ತ, ಲೇಖಕ ರಂಜಾನ್ ದರ್ಗಾ ಅವರ ಜೀವನದ ಪುಟಗಳು ಇನ್ನು ಮುಂದೆ ವಾರಕ್ಕೊಮ್ಮೆ.

Read More

ಮಹಾಲಕ್ಷ್ಮಿಯ ಮಡಿಲಿಗೆ ಸೇರಿದೆನಾದರೂ…

ನಾನು ಹೊಸಬ. ರಂಗರಾಜನ್ ಪಳಗಿದವರು. ಹೇಗೋ ರೇಟಿಂಗ್ ಹೆಚ್ಚಿಸಬೇಕೆಂದು ನನಗಿದ್ದ ಉತ್ಸಾಹಕ್ಕೆ ವಾಸ್ತವದ ಆಯಾಮವನ್ನು ನೀಡಿ ಭೂಮಿಗೆ ಇಳಿಸಿದರು. ‘ವೇಣೂ, ಪರಿಸ್ಥಿತಿಯನ್ನು ಅರ್ಥಮಾಡಿಕೊ. ನಮಗೆ ಅನುಕೂಲವಾದದ್ದನ್ನು ಸಾಧಿಸಬೇಕೆನ್ನುವುದು ಸರಿಯೇ. ಆದರೆ ಹೇಳಿಕೆಯಲ್ಲಿ ವಿಶ್ವಸಾರ್ಹತೆ ಕುಂಠಿತವಾಗುವಂತಹ ಅತ್ಯುತ್ಸಾಹ ತೋರಿಸಕೂಡದು.”
ಎಂ.ಎಸ್. ಶ್ರೀರಾಮ್‌ ಅನುವಾದಿಸಿದ ವೈ.ವಿ. ರೆಡ್ಡಿಯವರ ಆತ್ಮಕಥನದ ಆಯ್ದ ಭಾಗದ ನಾಲ್ಕನೆಯ ಕಂತು

Read More

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ