Advertisement

Tag: kendasampige

ಕಂಬಾರರಿಗೆ ಒದಗಿ ಬಂದ ಮತ್ತೊಂದು ಕತೆ ಚಾಂದಬೀ ಸರ್ಕಾರ

ದೇಶಪಾಂಡೆ ಅವರ ಮನೆಯಿಂದ ಖಾನ್ ಇದ್ದ ಸ್ಥಳಕ್ಕೆ ತಲುಪುವತನಕ ಚಾಂದಬೀ ಭೂಮಿಯ ಮೇಲೆ ಕಾಲೂರಲೇ ಇಲ್ಲ. ಕ್ಷಣಕ್ಕೊಮ್ಮೆ ಗರ್ಭವ ಮುಟ್ಟಿ ನೋಡಿಕೊಳ್ಳುತ್ತ ಪ್ರತಿಸಲವೂ ಹೊಸ ಹೊಸದಾಗಿ ಕೃಷ್ಣನ ತಾಯಿ ಯಶೋಧೆಯಾಗಿ ಕನಸು ಕಾಣತೊಡಗಿದಳು. ಖಾನನ ಬಳಿಗೆ ಹೋದೊಡನೆ ದೇಶಪಾಂಡೆ ದಂಪತಿಗಳ ಪ್ರೀತಿ, ಗೌರವಾದರಗಳನ್ನು ಹತ್ತು ಸಲ ಹೇಳಿದಳು. ಬಸಿರಾದ ವಿಷಯವನ್ನು ಹತ್ತು ಬಾರಿ ಹೇಳಿದಳು. ಪ್ರತಿಯೊಂದು ಸಲವೂ ಇದೇ ಮೊದಲನೇ ಸಲವೆಂಬಂತೆ ಪ್ರತಿಸಲವೂ ಹೊಸ ಹೊಸ ವಿವರಗಳೊಂದಿಗೆ ಹೇಳಿದಳು.
ಡಾ. ಚಂದ್ರಶೇಖರ ಕಂಬಾರರ ಹೊಸ ಕಾದಂಬರಿ ‘ಚಾಂದಬೀ ಸರ್ಕಾರ’ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ

ಕ್ಲಿಯೋಳ ಪ್ರಿಯಕರ ಮಾರ್ಷಿಯಲ್ ಆರ್ಟ್ಸ್‌ ಪ್ರವೀಣ. ಕ್ಲಿಯೋಳ ಎದುರು, ಬಹುಶಃ ಅನಗತ್ಯವಾಗಿ, ನಗ್ನನಾಗಿ ಅದರ ವೈಖರಿಯನ್ನು ಪ್ರದರ್ಶಿಸುತ್ತಾನೆ. ಕ್ಲಿಯೋ ತನ್ನ ಪ್ರಿಯಕರನ ಜೊತೆ ಇದ್ದಾಗಲೂ ಹೆಚ್ಚು ಉನ್ಮಾದಕರ ಭಾವ ಪ್ರಕಟಿಸುವುದಿಲ್ಲ. ನಸುನಗೆಯಲ್ಲಿಯೇ ವರ್ತಿಸುತ್ತಾಳೆ. ಅವಳದು ಚೌಕು ಎನ್ನಬಹುದಾದ ಮುಖದ ಆಕಾರ. ಕಂದು ಬಣ್ಣದ ಅವಳ ಮುಖದಲ್ಲಿ ಎದ್ದು ಕಾಣುವುದು ಕಣ್ಣು ಮಾತ್ರ. ಅದರ ಸೂಕ್ಷ್ಮವಾದ ಚಲನೆಯೇ ಭಾವ ಪ್ರಕಟಣೆಗೆ ಬೆಂಬಲ.

Read More

ಸೂರ್ಯನ ಕೃಪೆ ಧರಿಸುವ ಕ್ಲಾರಾ

ಚೇತರಿಸಿಕೊಳ್ಳಲೇ ಸಾಧ್ಯವಾಗದಷ್ಟು ಬಲಹೀನಳಾಗಿದ್ದ ಜೋಸಿ ಒಮ್ಮೆ ಸೂರ್ಯನ ಕಿರಣ ತಾಕಿದ್ದೇ ಚೈತನ್ಯಶೀಲಳಾಗಿದ್ದು ಹೇಗೆ? ಅವಳು ನಿಜದ ಜೋಸಿಯೇ ಅಥವಾ ರೋಬೋ ಜೋಸಿಯೇ? ಮನುಷ್ಯ ಚೈತನ್ಯವನ್ನು ಎಷ್ಟರ ಮಟ್ಟಿಗೆ ಅನುಕರಿಸಬಹುದು? ವ್ಯಕ್ತಿಯೊಬ್ಬಳ ಇರುವು ಆಕೆಗೆ ಮಾತ್ರ ಸಂಬಂಧಿಸಿದ್ದೋ ಅಥವಾ ಅದು ಆಕೆಯ ಸುತ್ತಲಿರುವ, ಆಕೆಯನ್ನು ಬಹುವಾಗಿ ಪ್ರೀತಿಸುವ ಸಮುದಾಯಕ್ಕೆ ಸಂಬಂಧಿಸಿದ್ದೋ? ಮುಂತಾದ ಸಂಕೀರ್ಣ ಪ್ರಶ್ನೆಗಳಿಗೆ ಈ ಕಾದಂಬರಿ ಒಡ್ಡಿಕೊಳ್ಳುತ್ತದೆ.

Read More

ಸುಜಯ್‌ ಪಿ ಬರೆದ ಈ ಭಾನುವಾರದ ಕತೆ

ಭಾಗೀರಥನ ಕಾಲನ್ನು ಬಿಡಿಸಲು ಬೇಕಾಗಿ ಸಂಕದ ಎರಡು ಹಲಗೆಗಳನ್ನು ಕಡಿದು ತೆಗೆದು ಬೇರೆ ಹಲಗೆ ಹಾಕುವಷ್ಟರಲ್ಲಿ ಡೀಮಣ್ಣ ಕಡಿಮೆಂದರೂ ಹತ್ತರ ಮೇಲೆ ಬೀಡಿ ಸೇದಿದ್ದರು. ಬೀಡಿ ಸೇದಿದ ಮೇಲೆ ಉಳಿಯುವ ಬೀಡಿಯ ತುದಿಯನ್ನು ಕೂಡಾ ಜಗಿದು ತಿನ್ನುವ ಅಭ್ಯಾಸವಿದ್ದ ಡೀಮಣ್ಣ ಆವತ್ತು ಪ್ರತೀ ಬೀಡಿ ಮುಗಿಯುತ್ತಲೂ ಬಂಗಾಳದ ಭಾಗೀರಥನಿಗೆ ಬಯ್ಯದೆ ಅವನನ್ನು ಈ ಊರಿಗೆ ಕರೆದುಕೊಂಡು ಬಂದ ಮಣಿಕಂಠನಿಗೆ ಬಾಯಿ ಬಂದಂತೆ ಬಯ್ಯುತ್ತಲೇ ಇದ್ದರು.

Read More

ವಾರಂಟ್ ಎಂಬ ಮಾಯಾ ಬಜಾರ್

ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ