Advertisement

Tag: kendasampige

ಕಣ್ರೆಪ್ಪೆ ಬಡಿದೇ ಹೇಳಿದ ಕತೆಯಿದು, ಅಲ್ಲಲ್ಲ.. ಜೀವನಚರಿತ್ರೆಯ ದೃಶ್ಯಗಳಿವು

ತಮ್ಮ ಆಸ್ಪತ್ರೆಯಲ್ಲಿರುವ ರೋಗಿಯೊಬ್ಬ ಪುಸ್ತಕವನ್ನು ಬರೆಯಬೇಕೆಂದ ಅಪೇಕ್ಷೆಯನ್ನು ಕೇಳಿ ಉಳಿದವರಿಗೆ ಆಶ್ಚರ್ಯವಾಗುತ್ತದೆ. ಡೊಮಿನಿಕ್ ಗೆ ಇದು ಅಸಾಧ್ಯವೆನಿಸುವುದಿಲ್ಲ. ಸ್ಪೀಚ್ ಥೆರಪಿಸ್ಟ್ ಹೇಳಿಕೊಟ್ಟ ಪ್ರಕಾರ ಸೂಚನೆಗಳನ್ನು ಅನುಸರಿಸಿ ಅಕ್ಷರಗಳನ್ನು ಹೆಣೆದು ಪದಗಳನ್ನು ಹೊಂದಿಸಿ ಬರೆಯುವವರು ಬೇಕೆಂದು ಬಯಸುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಜೀನ್ ಡೊಮಿನಿಕ್ ಬಾಬಿ ಜೀವನಚರಿತ್ರೆಯನ್ನಾಧರಿಸಿದ ಫ್ರಾನ್ಸ್‌ನ ʻದ ಡೈವಿಂಗ್‌ ಬೆಲ್‌ ಅಂಡ್‌ ದ ಬಟರ್‌ಫ್ಲೈ ʼ ಸಿನಿಮಾ ಕುರಿತ ವಿಶ್ಲೇಷಣೆ

Read More

ಹೆಸರು ಧರಿಸಲೊಲ್ಲದ ಅನಾಮಧೇಯರು

ಈ ಮಿಡಲ್ ಸಿಸ್ಟರ್, ಹದಿನೆಂಟು ವರ್ಷದ ಯುವತಿ. ಅವಳಿಗೆ ಪಕ್ಕದೂರಿನಲ್ಲಿ ತನ್ನ ಮತಕ್ಕೆ ಸೇರದ ಒಬ್ಬ ‘ಮೇ ಬಿ’ ಬಾಯ್‍ಫ್ರೆಂಡ್ ಕೂಡ ಇದ್ದಾನೆ. “ನಾನು ಯಾವತ್ತೂ ಹತ್ತೊಂಬತ್ತನೆಯ ಶತಮಾನದ ಕಾದಂಬರಿಗಳನ್ನೇ ಓದುತ್ತೇನೆ, ಇಪ್ಪತ್ತನೆಯ ಶತಮಾನದ ರಾಜಕೀಯದಿಂದ ತಪ್ಪಿಸಿಕೊಳ್ಳಲು ನಾನೇ ಕಂಡುಕೊಂಡ ಶಾಂತಿಮಾರ್ಗವಿದು” ಎನ್ನುವ ಮಿಡಲ್ ಸಿಸ್ಟರ್ ಮನೆಯಿಂದ ಕೆಲಸಕ್ಕೆ, ಕೆಲಸದಿಂದ ಮನೆಗೆ ಸಾಗುವ ರಸ್ತೆಯಲ್ಲಿ ಪುಸ್ತಕ ಓದುತ್ತ ನಡೆಯುತ್ತಾಳೆ. ಓದುವ ಸಂಸ್ಕೃತಿ ಇರದ, ಅಷ್ಟೇನೂ ವಿದ್ಯಾವಂತರಿಲ್ಲದ ಈ ಪ್ರಾಂತ್ಯದಲ್ಲಿ ಅವಳ ಈ ವಿಚಿತ್ರ ಹವ್ಯಾಸಕ್ಕೆ ಮೂಗು ಮುರಿಯುವವರೇ ಎಲ್ಲ.
ಕಾವ್ಯಾ ಓದಿದ ಹೊತ್ತಿಗೆ ಅಂಕಣ.

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಟ್‌ ಕತೆ

ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ