Advertisement

Tag: kendasampige

ಆಸ್ಟ್ರೇಲಿಯಾದ ಎನ್‌ಡಿಐಎಸ್‌ ಅನುದಾನದ ಏಳುಬೀಳುಗಳು: ಡಾ. ವಿನತೆ ಶರ್ಮ ಅಂಕಣ

ಈ NDIS ಸಹಾಯವನ್ನು ಪಡೆಯಲು ಕೆಲವು ಅರ್ಹತಾ ಮಾನದಂಡಗಳಿವೆ. ಅನುದಾನವನ್ನು ಕೋರಲು ಅಭ್ಯರ್ಥಿಗಳು ತಮಗಿರುವ ಅಂಗ ಮತ್ತು ಮಾನಸಿಕ ನ್ಯೂನತೆಗಳ ತಪಾಸಣಾ ವರದಿಗಳನ್ನು ಸಲ್ಲಿಸಬೇಕು. ತಮ್ಮ ಕುಟುಂಬ ವಾರ್ಷಿಕ ಆದಾಯ, ಸ್ಥಿರ, ಅಸ್ಥಿರ ಆಸ್ತಿ ವಿವರಗಳು, ಇರುವ ಸಾಮರ್ಥ್ಯಗಳ ಬಳಕೆ, ದೌರ್ಬಲ್ಯಗಳಿಂದ ಆಗುತ್ತಿರುವ ಪರಿಣಾಮ, ಹೀಗೇ ಅನೇಕ ದಾಖಲೆಗಳನ್ನು ಒದಗಿಸಬೇಕು. ಇವನ್ನೆಲ್ಲಾ ಪಡೆಯುವುದು, ಒದಗಿಸುವುದು ಸುಲಭದ ಮಾತಲ್ಲ. ಅನೇಕರಿಗೆ ಇದು ದೊಡ್ಡ ಚಾಲೆಂಜ್. ಇವರೊಡನೆ ಇವರ ಕುಟುಂಬ ಸದಸ್ಯರೂ ಕಣಕ್ಕಿಳಿದು ಪರದಾಡಬೇಕು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಅಪ್ಪನ ಅಂಗೈಯಲ್ಲಿ ತಿರುಗುವ ಚಕ್ರಗಳು…: ಲೈಲಾ ಪರ್ವೀನ್‌ ಬರಹ

ಬಾಬಾ ಎಲ್ಲಿಗೆ ಬೇಕಾದರೂ ಸೈಕಲ್ ಹೊಡೆದುಕೊಂಡು ಹೋಗುತ್ತಿದ್ದರು. ಅದು ಕಾಡಾಗಲಿ, ಸಣ್ಣ ಹಳುವಾಗಲಿ, ಗದ್ದೆ ಅಂಚಾಗಲಿ, ಕಲ್ಲುಗೊಜ್ಜಿನ ರಸ್ತೆಯಾಗಲಿ, ಯಾರ ಮನೆಯಂಗಳವೇ ಆಗಲಿ, ಯಾವ ರೀತಿಯ ಏರು ತಗ್ಗುಗಳಿರಲಿ, ಗುಂಡಿಗಳಿರಲಿ, ಬಂಡೆಕಲ್ಲೇ ಇರಲಿ ಎಲ್ಲದರ ಮೇಲೂ ಸೈಕಲ್ ಓಡಿಸುವ ಛಾತಿಯಿತ್ತು ಅವರಿಗೆ. ಹೇಳಿ ಕೇಳಿ ಸೈಕಲ್ಲುಗಳ ನಾಡಿಮಿಡಿತ ಬಲ್ಲ ವೈದ್ಯರಲ್ಲವೇ? ಸೈಕಲ್ಲು ಎಲ್ಲಿ ಹೇಗೆ ಹೋಗಬಲ್ಲುದು ಹಾಗೂ ಎಲ್ಲಿ ಹೋಗಲಾರದೆಂಬುದನ್ನು ಅವರಿಗಿಂತ ಚೆನ್ನಾಗಿ ಬಲ್ಲವರಿಲ್ಲ.
ತಮ್ಮ ತಂದೆಯವರ ಸೈಕಲ್‌ ಪ್ರೇಮದ ಕುರಿತು ಲೈಲಾ ಪರ್ವೀನ್‌ ಬರಹ ನಿಮ್ಮ ಓದಿಗೆ

Read More

ಮನದ ಕಿಟಕಿ: ರವೀಂದ್ರ ನಾಯಕ್ ಸಣ್ಕಕ್ಕಿಬೆಟ್ಟು ಅಂಕಣ

ಮನೆಯ ರಾಮಾಯಣ ಮುಗಿಸಿ ಹೊರಗೆ ಬಂದು ಡ್ಯೂಟಿಗೆಂದು ಬೈಕ್ ಹತ್ತುವಾಗ ಆ ಗಂಡಸಿನ ಮುಖ ನೋಡಬೇಕು… ಯುದ್ಧ ನಂತರದ ನಿರ್ಮಲ ಶಾಂತಿ, ಆನಂದ ಅವರ ಮುಖದಲ್ಲಿ; ಜೀವಾವಧಿ ಶಿಕ್ಷೆ ಮುಗಿಸಿ ಈಗಷ್ಟೇ ಹೊರ ಬಂದ ಖೈದಿಯ ಸಂತೋಷದಂತೆ ನಿರಾಳ ಮುಖಭಾವ. ಸಂಜೆ ಮತ್ತೆ ಮನೆಯ ಬಾಗಿಲು ಬಡಿಯುವಾಗ ಮತ್ತದೇ ಬೇಸರ. “ಒಂದೇ ಮನೆಯಲ್ಲಿ ವಿಚ್ಭೇದಿತ ಮನಸ್ಸುಗಳು ಸಹಭೋಜನ ಮಾಡುತ್ತವೆ” ಎಂದು ಎಲ್ಲೋ ಓದಿದ್ದ ಮಾತು ಇವರನ್ನು ನೋಡಿದಾಗ ಅದೆಷ್ಟು ನಿಜ ಅನ್ನಿಸಿತು…
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೆರಡನೆಯ ಬರಹ

Read More

ಉದ್ದಕೊಕ್ಕಿನ ಸೂರಕ್ಕಿ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಉದ್ದಕೊಕ್ಕಿನ ಸೂರಕ್ಕಿಗಳು ಉದುರೆಲೆ, ಕುರುಚಲು ಕಾಡು, ಎಸ್ಟೇಟು, ಮನೆಗಳ ಸುತ್ತಮುತ್ತಲು ಬೆಳೆದ ಹೂದೋಟಗಳಲ್ಲಿ ವಾಸ ಮಾಡುತ್ತವೆ. ಉದ್ದಕೊಕ್ಕಿನ ಸೂರಕ್ಕಿಗಳು ನೆಕ್ಟರಿನೈಡೆ ಕುಟುಂಬಕ್ಕೆ ಸೇರಿದ ಇತರ ಸೂರಕ್ಕಿಗಳಂತೆ ಮಕರಂದಪ್ರಿಯ ಹಕ್ಕಿಗಳು. ಕಾಡಿನಲ್ಲಾಗಲೀ, ಎಸ್ಟೇಟು-ಹೂದೋಟವೇ ಆಗಲೀ, ಮರಗಿಡಗಳಲ್ಲಿ ಹೂವರಳಿದರೆ ಸಾಕು, ಮಕರಂದಕ್ಕಾಗಿ ಎಲ್ಲಿದ್ದರೂ ಹಾಜರು! ಮಕರಂದವನ್ನು ಹೀರುವುದಕ್ಕಾಗಿಯೇ ಹೇಳಿಸಿ ಮಾಡಿಸಿದಂತಿರುವ, ಬಾಗಿದ ಉದ್ದವಾದ ಕೊಕ್ಕು ಮತ್ತು ಕೊಳವೆಯಂತಹ ನಾಲಿಗೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಉದ್ದಕೊಕ್ಕಿನ ಸೂರಕ್ಕಿಗಳ ಕುರಿತ ಬರಹ ಇಲ್ಲಿದೆ

Read More

ತುಂಬಾ ಕುಡಿದರೂ ತಲೆಗೇರದ `ತುಂಬಾ’: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

`ಮೇಘಾಲಯದ ವಾಕೆನ್ ಹಳ್ಳಿಯೊಂದರಲ್ಲಿ ನಡೆಯುವ ಬುಡಕಟ್ಟು ಉತ್ಸವದಲ್ಲಿ ಇದೇ ರೀತಿಯ ಪೇಯ ನೀಡುತ್ತಾರೆʼ ಎಂದು ಮೇಘಾಲಯದ ಗೆಳೆಯನೊಬ್ಬ ಅರುಹಿದ್ದ. ಇಲ್ಲಿನ ನಿರ್ಮಲ ಬುಡಕಟ್ಟು ಯಾವುದೇ ಪಂಗಡಕ್ಕೆ ಸೇರಿದವರಲ್ಲ. ದೇವರ ಹೆಸರು ಲಿಂಗ್‌ದಾ. ನೀವು ಕೇಳಿಲ್ಲ ಬಿಡಿ. ಭಕ್ತರು ತಮ್ಮ ಹೊಸ ಬೆಳೆಯನ್ನು ದೇವರಿಗೆ ಸಮರ್ಪಿಸುತ್ತಾರೆ. ಅಕ್ಕಿಯಿಂದ ತಯಾರಿಸಿದ ಬಿಯರೇ ಇಲ್ಲಿನ ದೇವರಿಗೆ ನೈವೇದ್ಯ. ಅದನ್ನೇ ಬಂದವರಿಗೆಲ್ಲಾ ತೀರ್ಥವಾಗಿ ಹಂಚುತ್ತಾರೆ! ಹಾಗಾಗಿ ಸರ್ವಾಂತರಯಾಮಿ ಈ ಪೇಯ! ಜಗದಗಲ ಹಬ್ಬಿದ ಈ ಸಂಪ್ರದಾಯಗಳ ತಾಯಿ ಬೇರೊಂದೆ ಅತಿಥಿ ಸತ್ಕಾರ ಮತ್ತು ಆರೋಗ್ಯ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ