Advertisement

Tag: kendasampige

ಸೀತಕ್ಕನ ವಠಾರ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಸ್ವಲ್ಪ ಹೊತ್ತು ಮಸೆದ ನಂತರ ತನ್ನ ತೋರು ಬೆರಳನ್ನು ಕತ್ತಿಯ ಅಲಗಿಗೆ ತಾಗಿಸುತ್ತಾ “ಹಾಂ, ಈಗ ಹರಿತ ಆಯ್ತು. ಕತ್ತಿ ಹರಿತ ಇಲ್ಲಂದ್ರೆ ಯಾವುದಕ್ಕೂ ಉಪ್ಯೋಗಿಲ್ಲ ನೋಡು. ಒಂದು ರೀತಿಯಲ್ಲಿ ಈ ಬಿಸಿ ಚಾ ಇದ್ದ ಹಾಗೆ. ಬಿಸಿಬಿಸಿ ಇದ್ದಾಗ ಮಾತ್ರ ಕುಡಿಬಹುದು, ಆದ್ರೆ ತಣ್ಣಗಾದ್ರೆ ಕುಡಿಯೋಕೆ ಆಗಲ್ಲ ಅಲ್ವಾ? ಸ್ಥಿತಿ ಮುಖ್ಯ, ಬರೇ ಚಾ ಅಲ್ಲ…” ಅಂತ ಹೇಳಿ ನಮ್ಮ‌ಮನೆ ಹಿಂದಿನ ತೋಟಕ್ಕೆ ತಾಗಿ ಇದ್ದ ಅವರ ಗದ್ದೆಗೆ ಹೋದ್ರು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ನಾಲ್ಕನೆಯ ಬರಹ

Read More

ಕರುಣಾಳು ಬಾ ಬೆಳಕೆ-ನವೋದಯ ಕನ್ನಡ ಕಾವ್ಯದಲ್ಲಿ ಪ್ರಾರ್ಥನೆ: ಸುಕನ್ಯಾ ಕನಾರಳ್ಳಿ ಅಂಕಣ

ನಾಗರಿಕತೆಯ ಇತಿಹಾಸ ಬರ್ಬರತೆಯ ಇತಿಹಾಸವೂ ಹೌದು ಎಂದು ಕಾರ್ಲ್ ಮಾರ್ಕ್ಸ್ ಹೇಳುತ್ತಾನೆ. ವೈಚಾರಿಕತೆ, ವಿಜ್ಞಾನ, ತಂತ್ರಜ್ಞಾನಗಳು ಹೊರಗಿಂದ ಬಂದು ಎರಡು ದಿನವಿದ್ದು ಮರಳಿ ಹೋದ ನೆಂಟರಾಗಿರಲಿಲ್ಲ. ಬದಲಿಗೆ ನಮ್ಮ ದೃಷ್ಟಿಕೋನಗಳನ್ನೇ ಪಲ್ಲಟಿಸಿದ, ಅಸಹನೆ ಮತ್ತು ಕ್ರೌರ್ಯಗಳನ್ನು ಸಾಮಾನ್ಯವಾಗಿಸಿದ ಪ್ರಚಂಡ ಶಕ್ತಿಯವು. ಯಂತ್ರವೇ ಬೃಹತ್ತಾಗಿ ಬೆಳೆದು ಮನುಷ್ಯ ಕುಲವನ್ನು ಆತ್ಮಹೀನವಾಗಿಸುವ ನಾಗರಿಕತೆ ಎಂಬ ದಮನಶಕ್ತಿಯ ಬಗ್ಗೆ ಎಚ್ಚರಿಸಲು ಇಂಗ್ಲೀಷ್ ರೊಮ್ಯಾಂಟಿಕ್ಕರು ಪ್ರಕೃತಿಯ ದನಿಯಾದ ಕಾವ್ಯವನ್ನೇ ಬಳಸಿಕೊಂಡರು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಏಳನೆಯ ಬರಹ

Read More

ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ

ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎ‍ಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ ‘ರಾಜಪ್ಪ ಎಲ್ಲಿ’ ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್.‌ ಬರಹ

ಈ ಬೆಟ್ಟಕ್ಕೆ, ಆ ಮರಕ್ಕೆ, ಹೆಂಚಿನ ಪುಟ್ಟ ಮನೆಗೆ ಹಿಮದ ಹೊದಿಕೆ ಬಂದುಬಿಡುತ್ತೆ. ನಮ್ಮನ್ನೂ ಆ ಹೊದಿಕೆ ಆವರಿಸಿಬಿಡುತ್ತದೆ. ವಿಸ್ಮೃತ ದೃಶ್ಯವನ್ನು ತಂದಿಟ್ಟುಬಿಡುತ್ತದೆ. ಹೆಜ್ಜೆ ಇಟ್ಟಲ್ಲೆಲ್ಲಾ ಹಿಮಮಣಿ ಕಾಲಿಗೆ ಮುತ್ತಿಡುತ್ತದೆ. ಎಳೆಕೂಸಿನ ಕೈ ಕಾಲುಗಳ ಮೆತ್ತಗೆ ಹಿಡಿದು ತೊಳೆಯುವಂತೆ ನಮ್ಮನ್ನು ತಣ್ಣಗೆ ಸೋಕಿ ತೊಳೆಯುತ್ತದೆ ಮಂಜು. ಹಿಮವು ನೆಲದ ಮೇಲೆ ಆವರಿಸಿದಾಗ ಧ್ವನಿ ಹೀರಿಕೊಳ್ಳುವ ಸಾಧನವಾಗಿ ಕಾರ್ಯನಿರ್ವಹಿಸುವುದರಿಂದ ಇಷ್ಟು ದಿನದ ಸದ್ದು ಸಪ್ಪಳ ಸುಮ್ಮನಾಗುತ್ತದೆ.
ಡಿಸೆಂಬರ್‌ ಚಳಿಯ ಕುರಿತು ಮಹಾಲಕ್ಷ್ಮೀ ಕೆ.ಎನ್.‌ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ