Advertisement

Tag: kendasampige

ಹೋಗುತ್ತಾ ಹೋಗುತ್ತಾ.. ಕಳೆದೇ ಹೋಗಿದ್ದೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಹಾಗೆ ನಡೆದುಕೊಂಡು ಹೋಗುವಾಗ, ಊರಿನ ಪಡ್ಡೆ ಹುಡುಗರೆಲ್ಲ ‘ಸೋಗಲಾಡಿ ಸುಬ್ಬಿ, ಸೋಗಲಾಡಿ ಸುಬ್ಬಿ’ ಎಂದು ತಮಾಷೆ ಮಾಡುತ್ತಿದ್ದರು. ಆರು ವರ್ಷದವಳಾಗಿದ್ದ ನಾನು, ಇವ್ಯಾವ ಮಾತು ನನಗೆ ಬೇಕಿಲ್ಲವೆಂಬಂತೆ ಅವರೆಡೆಗೆ ಕಣ್ಣು ಹಾಯಿಸಿ, ಹುಬ್ಬೇರಿಸಿ ಮುಂದೆ ಹೆಜ್ಜೆ ಹಾಕುತ್ತಿದ್ದೆ. ಶಾಲೆಗೆ ಬಂದರೆ ಕೇಳಬೇಕೇ! ಕೆಲವರು ‘ನೀನು ಮಲ್ಲವ್ವನೋ ಸಿಂಗಾರವ್ವನೋ?’ ಎಂದರೆ, ಎಲ್ಲ ಟೀಚರ್ ಸೇರಿ ‘ನಿಮ್ಮವ್ವಗ ಕೆಲ್ಸ ಇಲ್ಲ, ನಿಂಗ್ ಬ್ಯಾಸರಿಲ್ಲ ತಗ’ ಎಂದು ನಾನು ಮಾಡಿಕೊಂಡ ಸಿಂಗಾರದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Read More

ಸುಂದರ ಕಾಡಿನ ರೋಚಕ ಕಥೆಗಳು ಭಾಗ -೩: ರೂಪಾ ರವೀಂದ್ರ ಜೋಶಿ ಸರಣಿ

ಈ ಹೂವು ಪಾರಿಜಾತದಂತೇ ತಾನೇ ತಾನಾಗಿ ಮರದಿಂದ ಉದುರುವಂಥದ್ದು. ಅದಕ್ಕೇ ನಾವೆಲ್ಲಾ ಬೆಳಗ್ಗೆ ಬೇಗನೆ ಎದ್ದು, ಮುಖ ತೊಳೆದವರೇ, ಆ ಮರದತ್ತ ಓಡುತ್ತಿದ್ದೆವು. ಕಾರಣ, ಬೇರೆಯವರು ಬಂದು ಆರಿಸಿಕೊಂಡರೆ? ಎಂಬ ಆತಂಕ ಒಂದು ಇರುತ್ತಿತ್ತಲ್ಲಾ… ಓಡುತ್ತ ಹೋದವರೇ, ಮರದ ಬುಡಕ್ಕೆ ಬಿದ್ದ ಹೂವನ್ನು ಆರಿಸಿ, ಕಾಡು ಎಲೆಗಳ ಕೊಟ್ಟೆ ಮಾಡಿ ಅದರಲ್ಲಿ ತುಂಬಿಕೊಳ್ಳುತ್ತಿದ್ದೆವು. ಪುಟ್ಟ ವೃತ್ತಕಾರದ ಈ ಹೂವಿಗೆ ಸುತ್ತಲೂ ಕಣ್ಣು ರೆಪ್ಪೆಯಂಥ ಸೂಕ್ಷ್ಮವಾದ ಬೆಳ್ಳನೆಯ ಚೂಪನೆಯ ಎಸಳುಗಳು. ಮಧ್ಯದಲ್ಲಿ ಒಂದು ರಂದ್ರ. ಹಿಂಭಾಗ ಗುಮ್ಮಟೆಯಂತೆ ಇರುತ್ತದೆ. ಅದರ ಸುಗಂಧ ಅದ್ಭುತ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೆರಡನೆಯ ಕಂತು

Read More

ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ

ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು.
ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ

Read More

ಜೋಡಿಯ ಜೊತೆ, ಪ್ರಧಾನಿಯ ಮದುವೆ: ವಿನತೆ ಶರ್ಮ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ