Advertisement

Tag: kendasampige

ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ

ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ

Read More

ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ

ಇದರೊಳಗೆ ಒಂದು ತಮಾಷೆಯೆಂದರೆ ಪಾತ್ರದ ಜತೆಗೆ ನಟನೂ ಇರುತ್ತಾನೆ. ಪರಸ್ಪರ ಒಬ್ಬರಿಗೊಬ್ಬರನ್ನು ಕಂಡರೆ ಆಗದ ನಟರು ರಂಗದ ಮೇಲೆ ಪ್ರೇಮಿಸುತ್ತಾರೆ‌. ಪ್ರೀತಿಸಿದ ಹುಡುಗಿ ಅಜ್ಜಿಯೋ, ಸನ್ಯಾಸಿಯೋ ಆಗಿಬಿಟ್ಟಿರುತ್ತಾಳೆ. ಪ್ರೀತಿಸಿದ ನಟ ಇನ್ನೊಬ್ಬಳೊಂದಿಗೆ ಡಾನ್ಸ್ ಮಾಡ್ತಿರೋದನ್ನ ಅವನ ಪ್ರೇಯಸಿ ಸೈಡ್ ವಿಂಗಿನಲ್ಲಿ ಕೂತು.. ‘ಇದು ನಾಟಕ ಇದು ನಾಟಕ’ ಅಂತ ತನ್ನನ್ನೇ ಸಮಾಧಾನಪಡಿಸಿಕೊಳ್ಳುತ್ತಾಳೆ. ಹೀಗೆ ರಂಗದ ಮೇಲೆ ನಡೆಯುವ ನಾಟಕಕ್ಕಿಂತ ಹೆಚ್ಚು ರೋಚಕವಾದ ಅನೇಕ ನಾಟಕಗಳು ಈ ಪ್ರಕ್ರಿಯೆಯಲ್ಲಿ ನಡೆಯುತ್ತಲೇ ಇರುತ್ತದೆ. ಕಲಾಲೋಕದ ಕುರಿತು ಚಿತ್ರಾ ವೆಂಕಟರಾಜು ಹೊಸ ಸರಣಿ “ಚಿತ್ತು-ಕಾಟು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಎಸ್.ಎಲ್. ಭೈರಪ್ಪನವರ ಕಾದಂಬರಿಗಳಲ್ಲಿನ ರಾಚನಿಕತೆಯ ಪ್ರಶ್ನೆ: ಎನ್.ಎಸ್.ಶ್ರೀಧರ ಮೂರ್ತಿ ಬರಹ

ಭೈರಪ್ಪನವರ ಎರಡನೆಯ ಸಾಧ್ಯತೆಯ ಕಾದಂಬರಿಗಳಲ್ಲಿ ವೈಚಾರಿಕತೆ ಬಹುಮುಖಿಯಾಗಿದೆ. ಅದರ ಕೇಂದ್ರವನ್ನು ಕೃತಿಯ ಸಂರಚನೆ ಹಿಡಿದಿಡುತ್ತದೆ. ಇಲ್ಲಿನ ಓದು ಕೂಡ ಬಹುಮುಖಿಯಾಗ ಬೇಕಾಗಿದ್ದು. ‘ತಂತುʼ ಕಾದಂಬರಿಯನ್ನು ಇದಕ್ಕೆ ಉದಾಹರಣೆಯಾಗಿ ನೋಡಬಹುದು. ಇದು ತುರ್ತು ಪರಿಸ್ಥಿತಿಯ ರಾಜಕೀಯ ಕಥನ ಎನ್ನುವುದು ನಿಜ. ಅದರ ಜೊತೆಗೆ ಕೌಟಂಬಿಕ ಪ್ರಶ್ನೆಗಳಿವೆ. ತಾಯಿ-ಮಗನ ಸಂಬಂಧದ ಪರಿಶೀಲನೆ ಇದೆ. ದಾಂಪತ್ಯದಾಚೆಗೆ ಸೆಳೆಯುವ ಸಂಬಂಧವಿದೆ. ಸಂಗೀತದ ನೆಲೆ ಕೂಡ ಇದೆ. ಇದನ್ನು ಗಹನತೆಯ ಜೊತೆಗೆ ಅಲ್ಲಲ್ಲಿ ಕಾಣುವ ಜನಪ್ರಿಯ ವಿವರಗಳ ಜೊತೆಗೇ ಗ್ರಹಿಸಿಕೊಳ್ಳಬೇಕು.
ಎಸ್.ಎಲ್. ಭೈರಪ್ಪನವರ ಕಾದಂಬರಿಗಳ ಕುರಿತು ಎನ್.ಎಸ್.‌ ಶ್ರೀಧರಮೂರ್ತಿ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ನಿಜ ಆಸ್ಟ್ರೇಲಿಯಾ ಎಂಬ ಪ್ರಶ್ನೆ: ವಿನತೆ ಶರ್ಮಾ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ