Advertisement

Tag: kendasampige

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ

ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಗುರುವಿನ ಎದುರಲ್ಲಿ: ಸುಕನ್ಯಾ ಕನಾರಳ್ಳಿ ಅಂಕಣ

ಏನೇ ಆದರೂ ಇದು ತುಂಬ ಅಸಹಜ ಅಂತನ್ನಿಸಿತ್ತು. ತನ್ನ ವಯಸ್ಸಿನ ಸ್ನೇಹಿತರೇ ಇಲ್ಲದ, ಹೆಚ್ಚು ಹೆಚ್ಚು ಮಾನವೀಯಗೊಳಿಸುವ ಕಲೆಗಳ ಪರಿಚಯವಿಲ್ಲದ, ವಯಸ್ಸಿಗೆ ತಕ್ಕ ಜೀವನೋತ್ಸಾಹ ಇಲ್ಲದ, ಮುದುಕಿಯರ ಜೊತೆ ತೀರ್ಥಯಾತ್ರೆಗೆ ಹೋಗುವ, ಉಳಿದಂತೆ ಜನಸಂಪರ್ಕ ತೀರಾ ಕಮ್ಮಿಯಿರುವ ಬದುಕಿನ ಶೈಲಿಯ ಪರಿಣಾಮವೇ?
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಮೂರನೆಯ ಬರಹ

Read More

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ