Advertisement

Tag: kendasampige

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಬಿಸಿಲಿನ ತುಣುಕುಗಳಿಗೆ ಒಂದ್ ಪತ್ರ ಬರೆದು…..: ದೇವರಾಜ್‌ ಹುಣಸಿಕಟ್ಟಿ ಬರಹ

ಈ ಲೋಕದ ಹಂಗುಗಳು, ದರ್ದುಗಳು ಇರ್ಶೆಯನ್ನೇ ಹಾಸಿ ಹೊದ್ದು ಮಲಗಿವೆ. ಪ್ರೇಮಿಗಳ ಲೆಕ್ಕದಲ್ಲಂತು ಥೇಟ್ ರಾಕ್ಷಸಿ ಸೊರೂಪ… ಇಡೀ ಇತಿಹಾಸದುದ್ದಕ್ಕೂ ಇದು ದಿಟವಾಗಿದೆ… ಇಲ್ಲಾ ಅಂದ್ರೆ ರೋಮಿಯೋ ಜೂಲಿಯಟ್, ಮಮತಾಜ್ ಷಹ ಜಹಾನ್ ಇನ್ನೂ ಅದೆಷ್ಟೋ ಕಥನಗಳು ರೂಪ ಪಡೆದಿರುತ್ತಿರಲಿಲ್ಲ…
ಅಮೃತಾ ಪ್ರೀತಮ್ ಒಂದಷ್ಟು ಕವಿತೆಗಳನ್ನು “ಬಿಸಿಲಿನ ಅದೆಷ್ಟೋ ತುಣುಕುಗಳು” ಎಂಬ ಸಂಕಲನದಡಿ ರಶ್ಮಿ ಎಸ್ ಕನ್ನಡಕ್ಕೆ ಅನುವಾದಿಸಿದ್ದು, ಈ ಸಂಕಲನದ ಕುರಿತು ದೇವರಾಜ್ ಹುಣಸಿಕಟ್ಟಿ ಬರಹ

Read More

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಕನ್ನಡ ಪ್ರಜ್ಞೆ: ಸುಕನ್ಯಾ ಕನಾರಳ್ಳಿ ಅಂಕಣ

ನನ್ನ ಮನೆಗೆ ಯಾವ ಮಕ್ಕಳು ಬಂದರೂ ಕನ್ನಡದಲ್ಲಿ ಮಾತಾಡೋದಾದ್ರೆ ಮಾತ್ರ ಒಳಗೆ ಬನ್ನಿ ಅಂತ ಯಾವ ಮುಲಾಜಿಲ್ಲದೆ ಹೇಳಿಬಿಡ್ತೀನಿ. ಮೊನ್ನೆ ಮಹಾ ತರಾತುರಿಯಲ್ಲಿ ನಾಲ್ಕು ಮಕ್ಕಳು ಬಾಗಿಲು ಬಡಿದ್ರು. ಎಲ್ರೂ ಇಂಗ್ಲೀಶಲ್ಲಿ ಒಟ್ಟಿಗೆ ಮಾತಾಡ್ತಾ ಇದ್ರು. ಅವರನ್ನ ತಡೆದು ನಿಲ್ಲಿಸಿ ‘ಕನ್ನಡದಲ್ಲಿ ಹೇಳಿ’ ಅಂದೆ. ತಟ್ಟನೆ ಮೌನ. ಅರೆ ಗಳಿಗೆಯ ನಂತರ ಒಂದು ಮಗು ಧೈರ್ಯ ಮಾಡಿ ‘ನಾವು ಪ್ಲೇ ಮಾಡ್ತಾ ಇದೀವಿ. ಅಲ್ಲಿ ಅಭಿ ಕೌಂಟ್ ಮಾಡ್ತಾ ಇದಾನೆ. ಅದಕ್ಕೆ ನಾವೆಲ್ಲ ರನ್ ಮಾಡಿಕೊಂಡು ಬಂದ್ವಿ. ನಿಮ್ಮನೇಲಿ ಹೈಡ್ ಮಾಡಿಕೊಬಹುದಾ?ʼನಾನು ಕೇಳಿದ್ದು ಕನ್ನಡದಲ್ಲಿ ಹೇಳಿ ಅಂತ, ಕಿಚಡಿಯಲ್ಲಿ ಅಲ್ಲ ಎಂದಿದ್ದು ಪಾಪ ಮಕ್ಕಳಿಗೆ ಅರ್ಥ ಆಗಲಿಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎರಡನೆಯ ಬರಹ

Read More

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ