Advertisement

Tag: kendasampige

ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ತುಳುನಾಡಿನ ದೀಪಾವಳಿ: ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು

ಪಟಾಕಿ ಸುಡುವುದರ ಬಗ್ಗೆ ಕ್ಲಾಸಿನಲ್ಲಿ ಪಾಠದ ಮಧ್ಯೆ ಸುಮ್ಮನೆ ದಂಡಕ್ಕೆ ಎಂದು ಬೋಧಿಸಿದ್ದ ನಮ್ಮ ನೆರೆಮನೆಯ ದೇಜು ಮಾಸ್ಟ್ರು ತಮ್ಮ ಮಕ್ಕಳು ಕೃಷ್ಣ, ಲಕ್ಷ್ಮಣ, ಪುಟ್ಟ ಮಗು ಮಾರುತಿಯರನ್ನು ಕರೆದುಕೊಂಡು ಬಂದು ನಮ್ಮ ತಂದೆಯವರ ಜೊತೆಗೆ ನಿಂತು ಉತ್ಸವವನ್ನು ನೋಡಿದಂತಾಯಿತೆಂದು ಹೇಳಿಕೊಂಡು, ಖುಷಿ ಪಟ್ಟುಕೊಂಡು, ನಮ್ಮ ಸಂತೋಷದಲ್ಲಿ ಭಾಗಿಯಾಗಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ನಮ್ಮ ಸುಡು ಮದ್ದು ಬಿರುಸು ಬಾಣಗಳ ವೈಭವವನ್ನು ಸವಿದ ಊರವರು ಮುಂದೆ ವರ್ಷಗಟ್ಟಲೆ ಈ ದೀಪಾವಳಿಯನ್ನು `ಗುರುಕುಲೆ ಇಲ್ಲದ ದೀಪೋಲಿ’ ಎಂತಲೇ ನೆನಸಿ ಕೊಳ್ಳುತ್ತಿದ್ದರು.
ತುಳುನಾಡಿನ ದೀಪಾವಳಿಯ ಆಚರಣೆಗಳ ಕುರಿತು ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು ನಿಮ್ಮ ಓದಿಗೆ

Read More

ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ

ನಮ್ಮ ಮೊಬೈಲ್‌ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್‌ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ

Read More

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ಫ್ಲಾಪ್ ಆದ ಬಲೂನಿನ ಐಡಿಯಾ: ಬಸವನಗೌಡ ಹೆಬ್ಬಳಗೆರೆ ಸರಣಿ

ನನ್ನ ಐಡಿಯಾವನ್ನು ನನ್ನ ಗೆಳೆಯರು ಒಪ್ಪಿದರು. ಐಡಿಯಾವನ್ನು ಕಾರ್ಯಗತಗೊಳಿಸಲು ಅಣಿಯಾದೆವು. ಆದರೆ ನಾವೆಷ್ಟೇ ಪ್ರಯತ್ನಿಸಿದರೂ ಬಟ್ಟೆಯನ್ನು ಬಲೂನಿನೊಳಗೆ ತೂರಿಸಲು ಆಗಲಿಲ್ಲ! ಏನೇನೋ ಪ್ರಯತ್ನ ಪಟ್ಟು ಬಟ್ಟೆಯನ್ನು ಬಲೂನಿನೊಳಗೆ ಸೇರಿಸಿದೆವು. ಆದರೆ ಬಲೂನ್ ಒಡೆದ ಕೂಡಲೆ ಬಟ್ಟೆ ಮಡಿಚಿದ ಸ್ಥಿತಿಯಲ್ಲಿರುತ್ತಿತ್ತು! ಅಂದುಕೊಂಡಂತೆ ಅಕ್ಷರ ಕಾಣುತ್ತಲೇ ಇರಲಿಲ್ಲ! ಇದನ್ನು ಸರಿ ಮಾಡಲು ಬಹಳ ಪ್ರಯತ್ನಿಸುತ್ತಾ ಸಮಯ ಕಳೆದು ಹೋದದ್ದು ತಿಳಿಯಲೇ ಇಲ್ಲ. ಅದಾಗಲೇ ಬೆಳಗಿನ ಜಾವ ಮೂರಾಗಿತ್ತು!! ನಿದ್ದೆ ಮಂಪರು ಬೇರೆ, ನನ್ನ ಯೋಜನೆ ಕೈಗೊಡದಿದ್ದುದು ಬೇರೆ. ಯಾಕಾದ್ರೂ ಕಾರ್ಯದರ್ಶಿ ಆದೆನಪ್ಪಾ ಅನಿಸ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ