Advertisement

Tag: kendasampige

ನಾಯಿಕುರ್ಕನ ನೆರಳಿನಲ್ಲಿ: ವಿಜಯಶ್ರೀ ಹಾಲಾಡಿ ಕೃತಿಯ ಒಂದು ಪ್ರಬಂಧ

ಎಲ್ಲರೂ ಒಟ್ಟಾಗಿ ಅನ್ನ, ತಿಂಡಿ ತಿನ್ನುವಾಗ ಕರಿಯನ ಗಲಾಟೆಯೇ ಗಲಾಟೆ. ಯಾರಿಗೂ ತಿನ್ನಲು ಬಿಡದೆ ತಾನೇ ಎಲ್ಲವನ್ನೂ ಮುಕ್ಕಬೇಕೆನ್ನುವುದು ಅವಳ ಆಸೆ. ಎಂಥಾ ಬೊಬ್ಬೆ! ನನಗೆ ಏನು ಮಾಡಬೇಕೆಂಬುದೇ ತಿಳಿಯುತ್ತಿರಲಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಡೆ ಊಟ ಹಾಕುವ ವ್ಯವಸ್ಥೆ ಮಾಡಿಕೊಂಡೆ. ಆದರೆ ಎಲ್ಲ ಕಡೆಯೂ ಹೋಗಿ ತಾನೇ ಬಾಯಿಹಾಕಿ ಯಾರಿಗೂ ಸರಿಯಾಗಿ ತಿನ್ನಲು ಬಿಡದೆ, ಕರಿಯ ಅವಸ್ಥೆ ಕೊಡುತ್ತಿದ್ದಳು. ಕೊನೆಕೊನೆಗೆ ಕೋಲು ಹಿಡಿದು ಊಟ ಹಾಕುವ ಪರಿಸ್ಥಿತಿ ಬಂದಿತು. ಈ ನಡುವೆ ಪಾಪದ್ದು ದಾಸುಮರಿ ತುಂಬಾ ಕಷ್ಟ ಅನುಭವಿಸಿತು. ಅದಕ್ಕೆ ಬೇಗ ಬೇಗ ತಿನ್ನಲು ಆಗುತ್ತಿರಲಿಲ್ಲ. ಎಲ್ಲವನ್ನೂ ಕರಿಯನೇ ತಿಂದುಹಾಕುತ್ತಿತ್ತು. ಇಷ್ಟೇ ಆಗಿದ್ದರೆ ಹೋಗಲಿ ಅನ್ನಬಹುದಿತ್ತು.
ವಿಜಯಶ್ರೀ ಹಾಲಾಡಿ ಪ್ರಬಂಧಗಳ ಸಂಕಲನ “ಕಾಡಿನ ಸಂಗೀತ” ಕೃತಿಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ