Advertisement

Tag: kendasampige

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

Read More

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ