Advertisement

Tag: kendasampige

ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ‌ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ‌ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಇಂದಿನ ಕನ್ನಡ ಅಧ್ಯಾಪಕರು ಮತ್ತು ಇಂಗ್ಲಿಷ್ ಭಾಷೆ: ಎಲ್.ಜಿ.ಮೀರಾ ಅಂಕಣ

ಬರಬರುತ್ತಾ ಓದು, ವ್ಯುತ್ಪತ್ತಿ, ಭಾಷಾ ಪ್ರೌಢಿಮೆಗಳ ಬಗೆಗಿನ ಆಸ್ಥೆ ಕಡಿಮೆಯಾಗಿ `ಹಾಗೂ ಹೀಗೂ ಒಂದಿಷ್ಟು ಪಾಠ ಮಾಡೋದು, ಸಂತೆ ಹೊತ್ತಿಗೆ ಮೂರು ಮೊಳ ಆದ್ರೆ ಸಾಕು’ ಎಂಬ ಮನಃಸ್ಥಿತಿ ಮೂಡಿತು. ಇದೊಂದು ರೀತಿಯ ಸುಲಭೀಕರಣ. ಇದಕ್ಕೆ ಕನ್ನಡ ಅಧ್ಯಾಪಕರು ಮಾತ್ರ ಕಾರಣ ಅಲ್ಲ. ಜಾಗತೀಕರಣದ ನಂತರ, ಭಾರತ ದೇಶದ ಬದುಕು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳವಾಗಿ ಬದಲಾಯಿತು. ಉಪಗ್ರಹ ಪ್ರಸಾರದ ಅಂತಾರಾಷ್ಟ್ರೀಯ ಚಲನಚಿತ್ರ ವಾಹಿನಿಗಳು, ಅಂತರ್ಜಾಲ, ಮುಂದೆ ಸರ್ವವ್ಯಾಪಿಯಾದ ಚಲನವಾಣಿಗಳ ಬಳಕೆ ಇವುಗಳಿಂದಾಗಿ ಓದುಸಂಸ್ಕೃತಿ ಹಿಂದೆ ಸರಿದು ನೋಡುಸಂಸ್ಕೃತಿ ಮುನ್ನೆಲೆಗೆ ಬಂದಿತಲ್ಲವೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಬೆಳಕಿಗೆ ಅಂತ ಲಾಟೀನು, ಮೊಂಬತ್ತಿ ಬೆಂಕಿ ಪೆಟ್ಟಿಗೆ ತಂದಿಟ್ಟು ಪೆಟ್ರೋಮಾಕ್ಸ್‌ಗೆ ಹೊರಟೆ. ಅದು ಮೂರುನಾಲ್ಕು ಕಿಮೀ ದೂರದಲ್ಲಿ ನೋಡಿದ್ದೆ. ಆದರೆ ಅದನ್ನ ಯಾವತ್ತೂ ಹಚ್ಚಿ ಉಪಯೋಗಿಸಿರಲಿಲ್ಲ. ಅಂಗಡಿಗೆ ಹೋಗಿ ನಾಲ್ಕು ಪೆಟ್ರೋಮಾಕ್ಸ್ ಬಾಡಿಗೆ ತಗೊಂಡೆ. ಹೇಗೆ ಹಚ್ಚೋದು ಅಂತ ಅವನು ಅಂದರೆ ಅಂಗಡಿ ಓನರ್ ತೋರಿಸಿಕೊಟ್ಟ. ನಾಲ್ಕೂ ತಗೊಂಡು ಎರಡು ಶೌರಿ ನಮ್ಮ ವಾಚ್ಮನ್ನು, ಎರಡು ಸೈಕಲ್ ಹ್ಯಾಂಡಲ್‌ಗೆ ನೇತು ಹಾಕಿ ಮನೆ ಸೇರಿದೇವಾ? ಅವತ್ತು ರಾತ್ರಿ ಎಂಟಕ್ಕೆ ಎಲ್ಲರೂ ಸೇರಿ ನಮ್ಮ ಕಲಿತ ವಿದ್ಯೆ ಎಲ್ಲವನ್ನೂ ಖರ್ಚು ಮಾಡಿದರೂ ಒಂದೇ ಒಂದು ಪೆಟ್ರೋಮಾಕ್ಸ್ ಹತ್ತಲಿಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶ್ರಾವಣ ಸಂಜೆಯ ಮಳೆಯಂಥ ಪ್ರೀತಿ:‌ “ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

ಪರೀಕ್ಷೆಯ ವಿಚಾರ ಮಾತಾಡುವಷ್ಟರಲ್ಲಿ ಅವರ ಸಂಬಂಧಿ ಪ್ರತ್ಯಕ್ಷವಾಗಿದ್ದ. ಗೇಟಿನಲ್ಲೆ ನಮ್ಮಿಬ್ಬರನ್ನು ನೋಡಿರಬೇಕು. ಈಗಾಗಲೆ ಪರಿಚಯವಿದ್ದುದರಿಂದ ನನ್ನನ್ನು ಮಾತಾಡಿಸಿದ. ಮಾತಾಡಿಸಿ ‘ನೀವೇಕೆ ಬಂದಿದ್ದೀರಿ’ ಅಂದ. ನಾನು ಅದೆ ‘ಕ್ಯಾಸ್ಟ್ ಇನ್ಕಮ್’ ನೆಪ ಹೇಳಿದೆ ನನ್ನ ಸ್ನೇಹಿತರು ಬಂದಿದ್ದಾರೆ ಅವರನ್ನು ಮಾತಾಡಿಸುವ ಸಲುವಾಗಿ ಬಂದಿದ್ದೆ’ ಅಂದೆ ಅನುಮಾನ ಪಡುವ ಯಾವ ಘಟನೆಯೂ ನಮ್ಮಿಬ್ಬರ ವಿಷಯದಲ್ಲಿ ನಡೆದಿರಲಿಲ್ಲ. ನನಗೆ ಒಳ್ಳೆಯವನೆಂಬ ಪಟ್ಟ ಊರಲ್ಲಿತ್ತು. ಹಾಗಾಗಿ ಮಾತಾಡಿಸಿದವಳು ಇವಳ ಪರೀಕ್ಷೆ ಮುಗಿದ ಮೇಲೆ ಊರಿಗೆ ಕರೆದುಕೊಂಡು ಹೋಗಲು ಬಂದಿದ್ದೇನೆ ಅಂದ. ನನಗೆ ಏನು ಹೇಳಲು ಮಾತೆ ಇರಲಿಲ್ಲ.
“ದಡ ಸೇರದ ದೋಣಿ” ಸರಣಿಯಲ್ಲಿ ಮಾರುತಿ ಗೋಪಿಕುಂಟೆ ಬರಹ

Read More

ಗೋಮಾತೆಯ ಸಾಂಗತ್ಯದಲ್ಲಿ ಕಣ್ತೆರೆಯುವ ಬೆಳಗು: ಭವ್ಯ ಟಿ.ಎಸ್. ಸರಣಿ

ಕೊಟ್ಟಿಗೆಯಲ್ಲಿ ಯಾವುದಾದರೂ ಹಸು ಕರು ಹಾಕಿದರೆ ಮನೆಯಲ್ಲಿ ಬಾಣಂತಿ ಇದ್ದಷ್ಟೇ ಮುತುವರ್ಜಿ ವಹಿಸಬೇಕು. ಹಸುವಿಗೆ ಖಾರ ಮಾಡಿ ತಿನ್ನಿಸುವುದು, ಪುಟ್ಟ ಕರು ಗಟ್ಟಿಯಾಗುವವರೆಗೂ ಮನೆಯೊಳಗೆ ಸ್ವಲ್ಪ ಬೆಚ್ಚಗಿನ ಸ್ಥಳದಲ್ಲಿ ಇರಿಸಿ ಹಾಲುಣಿಸಲಷ್ಟೇ ತಾಯಿಯ ಬಳಿ ಕರೆದೊಯ್ಯವುದು ಮಾಡುತ್ತಾರೆ. ಕರುವಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುವಷ್ಟೇ ಹಾಲು ಕುಡಿಸಬೇಕು. ಅಜೀರ್ಣವಾದರೆ ಅಪಾಯವೆಂದು ಎಚ್ಚರಿಕೆ ವಹಿಸುತ್ತಾರೆ. ಹಸು ಕರುಗಳಿಗೆ ಮೈ ತೊಳೆಸಿ ಸ್ವಚ್ಛ ಜಾಗದಲ್ಲಿ ಮಲಗಲು ಬಿಡುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ