Advertisement

Tag: kendasampige

ಹೀಗೊಂದು ಆಸ್ಟ್ರೇಲಿಯಾದ ಋತು-ಗಾನ: ಡಾ. ವಿನತೆ ಶರ್ಮ ಅಂಕಣ

ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗುವ ವಸಂತಋತುವಿನ ಮೊದಲ ಭಾಗದಲ್ಲಿ ಅದೇನೊ ಒಂದು ರೀತಿಯ ಕಾಯುವಿಕೆಯಿದೆ. ಮಳೆಗಾಗಿ ಕಾಯುತ್ತಿರುವುದು ಭೂಮಿ, ಪ್ರಾಣಿಪಕ್ಷಿಗಳು ಮತ್ತು ನಾವು ಮನುಷ್ಯರು. ನಮ್ಮ ಕಾಯುವಿಕೆ ಪ್ರಕೃತಿಮಾತೆಗೆ ನಿಧಾನವಾಗಿ ಅರ್ಥವಾಯಿತೇನೊ ಅನ್ನುವಂತೆ ಭಾಸವಾಗುವುದು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬೀಸುವ ಬಿರುಗಾಳಿಯಿಂದ. ಇದು ಬರಲಿರುವ ಬೇಸಿಗೆಯ ಮಳೆಗಾಲದ ಚಿಹ್ನೆ. ಡಿಸೆಂಬರ್, ಜನವರಿ ತಿಂಗಳುಗಳಲ್ಲಿ ಮಳೆಗಾಲ. ಇದು ಒಮ್ಮೊಮ್ಮೆ ಫೆಬ್ರವರಿಗೂ ವಿಸ್ತರಿಸಿ ಅಲ್ಲಲ್ಲಿ ಪ್ರವಾಹಗಳು ಹರಿಯುತ್ತವೆ. ಮಾರ್ಚ್ ತಿಂಗಳಿಂದ ಮೇ ವರೆಗೆ ಶರತ್ಕಾಲ. ನಂತರ ಚಳಿಗಾಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಹಿರಿಯರಿಗೂ ಇಂದಿನ ಪೀಳಿಗೆಗೂ ಇರುವ ಅಂತರವನ್ನು ದಾಟುವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ಹಿರಿಯುರ `ರಾತ್ರಿ ಎಷ್ಟು ಹೊತ್ತಾದರೂ ಮಲಗದ, ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ’ ತಮ್ಮ ಸಂತಾನಗಳ ಮನಸ್ಸಿನ ಹಾಗೂ ಬದುಕಿನ ಮರ್ಮವೇನು ಎಂಬುದನ್ನು ಅರಿಯಲು ಮೊದಲು ತಾವೇ ಒಂದು ಹೆಜ್ಜೆ ಮುಂದೆ ಇಡಬೇಕಿದೆ. ಜಗತ್ತೇ ಒಂದು ಹಳ್ಳಿಯಾದ ಅಂತರ್ಜಾಲದ ಯುಗದಲ್ಲಿ, ಹಳ್ಳಿಯೇ ತಮ್ಮ ಜಗತ್ತಾಗಿದ್ದ ಪೀಳಿಗೆಗೆ ಮತ್ತು ಅವರ ಮಕ್ಕಳಿಗೆ ಈ ಹೆಜ್ಜೆಯು ಒಂದು ಸವಾಲು. ಆದರೆ, ವಿಧಿ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮಿಂದ ಮಾನಸಿಕವಾಗಿ ಹಾಗೂ ಭಾವನಾತ್ಮಕವಾಗಿ ದೂರ ಆಗಬಾರದು ಎಂದರೆ ಅವರ ಬದುಕಿನ ಲಯಗಳನ್ನು ಅರಿಯಲು ಹಿರಿಯ ಪೀಳಿಗೆಯವರು ಪ್ರಯತ್ನ ಮಾಡಲೇಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ

ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ‌ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

Read More

ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ ಶುರು

ಮೊದಲಿನಿಂದ ಖಾಲಿಯೇ ಇರುವ ಕುರ್ಚಿಗಿಂತ ನಡುವೆ ಒಂದಷ್ಟು ಹೊತ್ತು ಯಾರೋ ಕುಳಿತಿದ್ದು ಎದ್ದು ಹೋದ ಆಸನ ಹೆಚ್ಚು ಖಾಲಿಯಾಗಿ ಕಾಣುತ್ತದೆ. ನವ ಮಾಸ ತುಂಬಿದ ಬಳಿಕ ಜೀವದ ಬದಲಿಗೆ ಶೂನ್ಯವನ್ನು ಹಡೆದ ಒಡಲು ಹೊಸದಾದ ಖಾಲಿತನಕ್ಕೀಡಾಗುತ್ತದೆ. ಬಂದೇ ಬರುವನೆಂದು ನಂಬಿದ್ದ ಅತಿಥಿ.. ಬರಲೇ ಬೇಕಿದ್ದ ಅತಿಥಿ.. ಅವನ ಸ್ವಾಗತಕ್ಕೆ ಏನೆಲ್ಲ ತಯಾರಾಗಿತ್ತು! ತಂದಿಟ್ಟುಕೊಂಡ ಮಲ್ಲಿಗೆ ಮೆದುವಿನ ಟೊಪ್ಪಿಯಿತ್ತು. ಮೊಲದ ತುಪ್ಪಳದಂಥಾ ಅಂಗಿಯಿತ್ತು. ಅದರ ಅಂಚಲ್ಲಿ ಕೈಯಲ್ಲೇ ಹೊಲಿದ ಕಸೂತಿಯಿತ್ತು.
ವಿನಾಯಕ‌ ಅರಳಸುರಳಿ ಹೊಸ ಅಂಕಣ “ಆಕಾಶ ಕಿಟಕಿ” ಇಂದಿನಿಂದ, ಮಂಗಳವಾರಗಳಂದು, ಹದಿನೈದು ದಿಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ