Advertisement

Tag: kendasampige

ಮಾನವನ ವಿಕಾಸಕ್ಕೆ ಪ್ರಶ್ನಿಸುವುದೇ ಆಧಾರ: ನಮ್ರತಾ ಪೊದ್ದಾರ್‌ ಬರಹ

ಬಹಳ ಪೋಷಕರು ಮಕ್ಕಳ ಕುತೂಹಲಭರಿತ ಪ್ರಶ್ನೆಗಳಿಗೆ ನಕ್ಕು ಸುಮ್ಮನಾಗಿಯೋ ಅಥವಾ ಅರೆಬರೆ ಉತ್ತರ ಕೊಟ್ಟೋ ಜಾರಿಕೊಳ್ಳುತ್ತಾರೆ. ತಮ್ಮ ನಂಬಿಕೆಗಳಿಗೆ ಹಾಗೂ ಆಚಾರ, ವಿಚಾರಕ್ಕೆ ಸರಿಹೊಂದದೆ ಇರುವ ಪ್ರಶ್ನೆಗಳನ್ನು ಮಕ್ಕಳು ಕೇಳಿದಾಗ ಕಸಿವಿಸಿಗೊಂಡು ಕೋಪಿಸಿಕೊಳ್ಳುವುದನ್ನು ನೋಡಿದ್ದೇವೆ. ಯಾವುದೇ ವಿಷಯದ ಬಗ್ಗೆ ಗೊತ್ತಿಲ್ಲದಿರುವುದು ಅವಮಾನದ ಮಾತಲ್ಲ. ನಾವೇ ಏನೋ ಊಹೆ ಮಾಡಿಕೊಂಡು, ಖಾಲಿ ಇರುವ ಜಾಗದಲ್ಲಿ ಏನೋ ತುಂಬಿಕೊಂಡು ಸತ್ಯವನ್ನು ಹುಡುಕುವ ಗೋಜಿಗೆ ಹೋಗದಿರುವುದು ತಪ್ಪು.
ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

Read More

ಆಟೋ ಕರೆಕ್ಷನ್: ಸುಮಾವೀಣಾ ಸರಣಿ

ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್‌ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್‌ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ

Read More

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ಕಾಣದ್ದು ಕಾಣಿಸಿದ್ದು…!: ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿಯ ಕುರಿತು ಕಲ್ಲೇಶ್ ಕುಂಬಾರ್ ಬರಹ

ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ ಓದುಗನು ಸ್ವಯಂ ಮರಳಿ ಮೂಲ ಕೃತಿಗಳನ್ನು ಓದುವುದಕ್ಕೆ ಉತ್ಸುಕನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ! ಇನ್ನೂ ಹೇಳಬೇಕೆಂದರೆ, ಕೃತಿಕಾರ ಮರೆಯಾಗಿ ಕೃತಿಯೇ ಮುಖ್ಯವಾಗುವುದು, ಹಾಗೂ ಆ ಕೃತಿಯ ಮೂಲಕವೇ ಕೃತಿಕಾರ ಗುರುತಿಸಿಕೊಳ್ಳುವಂತಾಗುವುದು ಒಂದು ಕ್ರಿಯೆ. ಅಂಥ ಲೇಖಕ ಮತ್ತು ಆ ಲೇಖಕನ ಕೃತಿಗಳು ಶಾಶ್ವತವಾಗಿ ನಿಲ್ಲುತ್ತವೆ! ಹಾಗೆ ನಿಲ್ಲಬಹುದಾದ ಲೇಖಕರ ಕೃತಿಗಳನ್ನು ಓದುಗರಿಗೆ ಸುಭಾಷ್ ರಾಜಮಾನೆ ಅವರು ಪರಿಚಯಿಸಿದ್ದಾರೆ.
ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿ “ಕಂಡದ್ದು ಕಾಣದ್ದು” ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ

ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ