Advertisement

Tag: kendasampige

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬದುಕು ಎಂಬ ಶಿಕ್ಷಕ, ಮನುಷ್ಯ ಎಂಬ ವಿದ್ಯಾರ್ಥಿ: ಎಲ್.ಜಿ.ಮೀರಾ ಅಂಕಣ

ಬದುಕಿನ ಅನಿಶ್ಚಿತತೆ, ಮನುಷ್ಯನ ಬದುಕಿನಲ್ಲಿ ವಿಧಿಯು ಆಡುವ ಆಟ, ಎಷ್ಟೇ ಪ್ರಯತ್ನ ಮಾಡಿದರೂ ತನ್ನ ವಿಧಿಯಲ್ಲಿ ಬರೆದ ದುರಂತದಿಂತ ತಪ್ಪಿಸಿಕೊಳ್ಳಲಾಗದ ಮನುಷ್ಯನ ಅಸಹಾಯಕತೆ – ಇವುಗಳನ್ನು ಈ ಮಹಾನ್ ನಾಟಕ ಮನೋಜ್ಞವಾಗಿ ಹೇಳುತ್ತದೆ. ಒಂದು ಸಂದರ್ಭದಲ್ಲಿ `ಅಯ್ಯೋ, ದುರ್ವಿಧಿಯೇ? ನಾಳೆ ಎಂಬುದು ಏನೆಂದು ಗೊತ್ತಿರದ ಮನುಷ್ಯನ ಪಾಡೆ!! ಓಹ್ …. ಅಯ್ಯೋ .., ಸಾಯುವವರೆಗೂ ಯಾರನ್ನೂ ಸುಖಿ ಅನ್ನಬೇಡ’’ ಎಂಬ ಮಾತನ್ನು ನಾಟಕಕಾರ ಸಫೋಕ್ಲಿಸ್ ಒಂದು ಎಚ್ಚರಿಕೆಯೆಂಬಂತೆ, ಒಂದು ಪಾತ್ರದ ಬಾಯಿಂದ ಹೇಳಿಸಿದ್ದಾನೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ