Advertisement

Tag: kendasampige

ರುಕ್ಮಣಮ್ಮಜ್ಜಿಯ ನೆನಪುಗಳು….: ಸುಮಾ ಸತೀಶ್ ಸರಣಿ

ಅಂಗಡೀಗೇ ಮಾರಾಕೆ ಮಾತ್ರ ನಮ್ಮಜ್ಜೀ ತಿಂಡೀಗ್ಳು ಮೀಸ್ಲಲ್ಲ. ಮಾರಾಕಿಂತ ರವಷ್ಟು ಜಾಸ್ತೀನೆ ದಾನ ಮಾಡ್ತಿತ್ತು. ಒಂದು ಬೇಸನ್ ತಿಂಡಿ ಮಾರಾಕಿಟ್ರೆ, ಎಲ್ಡು ಬೇಸನ್ ಅವ್ರಿವ್ರಿಗೆ ಕೊಡೋಕೇ ಸಾಲ್ತಿರ್ಲಿಲ್ಲ. ಆದ್ರೂ ಒಲೆ ಮುಂದೆ ಕುಂತ್ಕಣಾಕೆ ಎಂದ್ರೂ ಬ್ಯಾಸ್ರ ಪಟ್ಟಿದ್ದಿಲ್ಲ. ಪಕ್ಕದ್ ಮನ್ಯಾಗಿದ್ದ ವಾರ್ಗಿತ್ತೀಗೆ ಮನೆ ತುಂಬಾ ಮಕ್ಳು. ಅದ್ರಾಗೂ ಸಾಲಾಗಿ ಒಂಬತ್ತು ಹೆಣ್ಣುಮಕ್ಕಳು. ಅದ್ಕೇಯಾ ತಿಂಡೀ ತೀರ್ಥದಾಗೆ ಕೈ ಬಿಗಿ ಮಾಡ್ತಿದ್ರು. ನಮ್ಮಜ್ಜೀ ಜೀವ ನಿಲ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಅಜ್ಜಿ ರುಕ್ಮಣ್ಣಮ್ಮನವರ ಕುರಿತು ಬರೆದಿದ್ದಾರೆ

Read More

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More

ಅನ್ನ, ನೀರಿಗೇಕೆ ಅನಾದರ ತೋರುವಿರಿ?: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನಪತ್ರಿಕೆಯಲ್ಲಿ ಪ್ರಕಟವಾದ ಮಾಹಿತಿಯೊಂದರ ಪ್ರಕಾರ 2019 ರಲ್ಲಿ ಜಗತ್ತಿನಾದ್ಯಂತ 93.1 ಕೋಟಿ ಟನ್‌ನಷ್ಟು ಆಹಾರ ಪೋಲಾಗಿದೆ! ಇದೇ ವರ್ಷ 69 ಕೋಟಿ ಜನರು ಆಹಾರದ ಕೊರತೆ ಎದುರಿಸಿದ್ದಾರೆ!! ಇದರಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣವೇ ಹೆಚ್ಚು ಎಂಬ ವರದಿಯಿದೆ. ಭಾರತದಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣ ವಾರ್ಷಿಕ ತಲಾವಾರು 50 ಕೆಜಿಯಷ್ಟು ಎಂದು ಅಂದಾಜಿಸಲಾಗಿದೆಯಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಬಾವಿಯೊಳಗೆ `ಪುಣ್ಯಕೋಟಿ’: ನಟರಾಜ್‌ ಅರಳಸುರಳಿ ಕೃತಿಯ ಬರಹ

ತಂಡೋಪತಂಡವಾಗಿ ಜನ ನಮ್ಮ ಮನೆಕಡೆ ಬರುತ್ತಿರುವುದು ಕಾಣಿಸಿತು. ಹಲವಾರು ಬ್ಯಾಟರಿ ಬೆಳಕುಗಳೂ ಒಂದೆರಡು ಪೆಟ್ರೋಮ್ಯಾಕ್ಸ್‌ಗಳೂ ಆ ಗುಂಪಿನಲ್ಲಿದ್ದವು. ಎಲ್ಲರೂ ಮನೆಯಂಗಳಕ್ಕೆ ಬಂದವರೇ ನೇರವಾಗಿ ಬಾವಿಯಕಡೆ ನಡೆದರು. ನೋಡನೋಡುತ್ತಿದ್ದಂತೆ ಮೂರ್ನಾಲ್ಕು ಜನ ಬಾವಿ ಇಳಿದರು. ಕೆಲವರು ಮೇಲಿನಿಂದ ನೇಣು ಇಳಿಬಿಟ್ಟರು. ದನಗಳ ಹೊಟ್ಟೆ ಕೆಳಗೆ ನೇಣು ತೂರಿಸಿ ಬಾವಿಯ ಇನ್ನೊಂದು ಭಾಗದಲ್ಲಿದ್ದವರಿಗೆ ತಲುಪಿಸಿದರು. ನೋಡ ನೋಡುತ್ತಿದ್ದಂತೆಯೇ ಒಂದೊಂದೇ ದನಗಳನ್ನು ಬಾವಿಯಿಂದ ಮೇಲೆತ್ತಿದರು.
ನಟರಾಜ್‌ ಅರಳಸುರಳಿ ಬರೆದ ತಮ್ಮ ತಂದೆಯವರ ಕುರಿತ ಬರಹಗಳ ಸಂಕಲನ “ಆಕಾಶಬುಟ್ಟಿ” ಕೃತಿಯ ಒಂದು ಬರಹ ನಿಮ್ಮ ಓದಿಗೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ