Advertisement

Tag: kendasampige

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ

ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ

ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ