Advertisement

Tag: kendasampige

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಪುಸ್ತಕ ಕೊಳ್ಳಲು ಹೋದವನಿಗೆ ಲೈಬ್ರರಿ ಕೊಟ್ಟವರು: ದರ್ಶನ್‌ ಜಯಣ್ಣ ಸರಣಿ

ಮಾತು ಕಥೆಯೆಲ್ಲ ಮುಗಿದಮೇಲೆ ಕಾರಿನ ಡಿಕ್ಕಿ ಮತ್ತೊಮ್ಮೆ ತೆಗೆಯಲು ಹೇಳಿದರು. ನಾನೂ ಹಾಗೆಯೇ ಮಾಡಲಾಗಿ ಸಾರಾ ಮತ್ತು ಆಲ್ವಿನ್ ದಂಪತಿಗಳು ತಮ್ಮ ಕಾರಿನಿಂದ ಹಲವು ಬ್ಯಾಗುಗಳಲ್ಲಿದ್ದ ನೂರಾರು ಪುಸ್ತಕಗಳನ್ನು ನಾನು ಕೇಳದೆಯೇ ಉಚಿತವಾಗಿ ನನ್ನ ಕಾರಿಗೆ ಸೇರಿಸಿದರು. ನಾನು ಇವೆಲ್ಲವನ್ನೂ ಯಾವಾಗ ಓದುವುದು ಎಂದು ಯೋಚಿಸುತ್ತಿದ್ದೆ! ಬೇಡವೆಂದರೂ ಅವರು ಕೇಳಲಿಲ್ಲ. ಹೀಗೆ ಪುಸ್ತಕ ಕೊಳ್ಳಲು ಹೊರಟವನಿಗೆ ಲೈಬ್ರರಿಯೇ ದೊರಕಿದ್ದು ಅತ್ಯಂತ ಚೇತೋಹಾರಿ ಸಂಗತಿ.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ